ಸಾರಿಗೆ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ: ದಿನೇಶ್ ಗುಂಡೂರಾವ್

  ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ನೌಕರರಿಗೆ ವೇತನ ನೀಡದ ಹಿನ್ನಲೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಿನೇಶ್ ಗುಂಡೂರಾವ್ ಅವರು…

dinesh gundu rao vijayaprabha

 

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ನೌಕರರಿಗೆ ವೇತನ ನೀಡದ ಹಿನ್ನಲೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿ, KSRTCಯ 4 ನಿಗಮಗಳ ನೌಕರರಿಗೆ ವೇತನ ನೀಡದಿರುವುದು ಸಾರಿಗೆ ಇಲಾಖೆ ಹಾಗು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ. ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ಸಿಬ್ಬಂದಿಗಳಿಗೆ ಸಂಬಳ ನೀಡಿಲ್ಲ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸುವುದು ಹೇಗೆ? ಸರ್ಕಾರ ಕೂಡಲೇ ಸಾರಿಗೆ ನೌಕರರ ಸಂಬಳದ ಬಗ್ಗೆ ಗಮನ ಹರಿಸಬೇಕು.

Vijayaprabha Mobile App free

ಸಾರಿಗೆ ನೌಕರರ ಸಂಬಳ ಆಗದಿರುವದಕ್ಕೆ ಸಚಿವ ಲಕ್ಷ್ಮಣ್ ಸವದಿ ಅವರು ಕೋವಿಡ್ ಸೋಂಕಿನ ನೆಪ ಹೇಳಿದ್ದಾರೆ. ಕೋವಿಡ್ ಬಿಸಿ ಕೇವಲ ಸಾರಿಗೆ ಇಲಾಖೆಗೆ ಮಾತ್ರ ತಟ್ಟಿಲ್ಲ. ಕೋವಿಡ್ ಸೋಂಕು ನೆಪ ಹೇಳುವುದು ಬಿಟ್ಟು ಸಾರಿಗೆ ಇಲಾಖೆ, ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದ್ದು, ಈಗ ಹಣಕಾಸು ಇಲಾಖೆ ಕಡೆ ಬೊಟ್ಟು ತೋರಿಸಿದರೆ ಸಾರಿಗೆ ನೌಕರರ ಜೀವನ ನಡೆಯುವುದ್ದೇಗೆ? ಎಂದು ಮಾಜಿ ಕೆಪಿಸಿಸಿ ಅದ್ಯಕ್ಸ್ಯ ದಿನೇಶ್ ಗುಂಡೂರಾವ್ ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.