Director Guruprasad: ಬ್ರಾಹ್ಮಣ ಸಂಪ್ರದಾಯದಂತೆ ನಿರ್ದೇಶಕ ಗುರುಪ್ರಸಾದ್ ಅಂತಿಮ ಸಂಸ್ಕಾರ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರ ಅಂತಿಮ ಸಂಸ್ಕಾರವು ರವಿವಾರ (ನವೆಂಬರ್ 3) ಸಂಜೆ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಈ ಸಂದರ್ಭದಲ್ಲಿ ಗುರುಪ್ರಸಾದ್ ಅವರ ಸಹೋದರ…

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ ಅವರ ಅಂತಿಮ ಸಂಸ್ಕಾರವು ರವಿವಾರ (ನವೆಂಬರ್ 3) ಸಂಜೆ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು.

ಈ ಸಂದರ್ಭದಲ್ಲಿ ಗುರುಪ್ರಸಾದ್ ಅವರ ಸಹೋದರ ಹರಿಪ್ರಸಾದ್, ಎರಡನೇ ಪತ್ನಿ ಸುಮಿತ್ರಾ, ಮೊದಲ ಪತ್ನಿ ಆರತಿ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಕನ್ನಡ ಚಿತ್ರರಂಗದ ಗಣ್ಯರುಗಳಾದ ಯೋಗರಾಜ್ ಭಟ್, ದುನಿಯಾ ವಿಜಯ್, ಡಾಲಿ ಧನಂಜಯ್, ತಬಲಾ ನಾಣಿ, ಸತೀಶ್ ನೀನಾಸಂ ಸೇರಿದಂತೆ ಅನೇಕರು ಅಂತಿಮ ವಿಧಿ ವೇಳೆ ಭಾಗವಹಿಸಿ ಗುರುಪ್ರಸಾದ್ ಅವರಿಗೆ ನಮನ ಸಲ್ಲಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.