ಬೆಂಗಳೂರು: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಜಿಲ್ಲಾಮಟ್ಟದಲ್ಲಿ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದ್ದು, ವೇಳಾಪಟ್ಟಿಗೆ ಅನ್ವಯ ಮಾರ್ಚ್ 28 ರಿಂದ ಏಪ್ರಿಲ್ 13ರವರೆಗೆ ಮಧ್ಯಾಹ್ನ 2.30-5.45ರ ಅವಧಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶಿಸಲಾಗಿದೆ.
ಇನ್ನು, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನವನ್ನು ಏಪ್ರಿಲ್ 20ರೊಳಗೆ ಪೂರ್ಣಗೊಳಿಸಿ, ಏಪ್ರಿಲ್ 30ರಂದು ಫಲಿತಾಂಶವನ್ನು ಬಿಡುಗಡೆ ಮಾಡಲಿದದ್ದು, ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ 25 ರಿಂದ ಜೂನ್ 6ವರೆಗೆ ಪೂರಕ ಪರೀಕ್ಷೆ ನಡೆಸಿ, ಜೂನ್ 15 ರಂದು ಘಲಿತಾಂಶ ಪ್ರಕಟಿಸುವಂತೆ ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.