ಗಂಡನಿಂದ ವರದಕ್ಷಿಣೆ ಕಿರುಕುಳ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 24ರ ಯುವ ವೈದ್ಯೆ!

ತಿರುವನಂತಪುರಂ: ಒಂದು ವರ್ಷದ ಹಿಂದಷ್ಟೇ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವ ವೈದ್ಯೆ ತನ್ನ ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಕೊಲ್ಲಂನ ಗಂಡನ ಮನೆಯಲ್ಲಿ ನಡೆದಿದೆ. 24 ವರ್ಷದ…

ತಿರುವನಂತಪುರಂ: ಒಂದು ವರ್ಷದ ಹಿಂದಷ್ಟೇ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವ ವೈದ್ಯೆ ತನ್ನ ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಕೊಲ್ಲಂನ ಗಂಡನ ಮನೆಯಲ್ಲಿ ನಡೆದಿದೆ.

24 ವರ್ಷದ ಎಸ್​.ವಿ ವಿಸ್ಮಯ ಮೃತ ದುರ್ದೈವಿಯಾಗಿದ್ದು, ಸೋಮವಾರ ಬೆಳಗ್ಗೆ ಯುವತಿ ನೇಣಿಗೆ ಶರಣಾಗಿದ್ದು, ಈಗಾಗಲೇ ಗಂಡ ಕಿರಣಕುಮಾರ್​​ ಎಂಬುವರನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಮೃತ ಎಸ್​.ವಿ ವಿಸ್ಮಯ ಸಾವಿಗೂ ಮುನ್ನ ತಾನು ಗಂಡನ ಮನೆಯಲ್ಲಿ ಅನುಭವಿಸಿದ್ದ ಕಷ್ಟವನ್ನ ವಾಟ್ಸಾಪ್​ ಮತ್ತು ಫೇಸ್​ ಬುಕ್ ​ನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ.

ವರದಕ್ಷಿಣೆ ರೂಪದಲ್ಲಿ ಕಾರು ನೀಡುವಂತೆ ಮೇಲಿಂದ ಮೇಲೆ ಗಂಡ ಕಿರಣಕುಮಾರ್​ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ವಿಸ್ಮಯ ಸೋದರ ಸಂಬಂಧಿಗೆ ಸಂದೇಶ ರವಾನೆ ಮಾಡಿದ್ದು, ಅದರ ಫೇಸ್ ​ಬುಕ್​​ ಚಾಟ್​ ಕೂಡ ಇದೀಗ ವೈರಲ್​​ ಆಗಿದೆ. ಇನ್ನು ಈ ಸಂದರ್ಭದಲ್ಲಿ ಇದು ನನ್ನ ಕೊನೆ ಫೋಸ್ಟ್ ಕೂಡ ಆಗಬಹುದು ಎಂದು ವಿಸ್ಮಯ ಹೇಳಿಕೊಂಡಿದ್ದು, ಈ ಹಿಂದೆ ಕೂಡ ಅನೇಕ ಸಲ ಕ್ರೂರವಾಗಿ ಥಳಿಸಿದ್ದಾನೆಂದು ಆರೋಪಿಸಿದ್ದಾಳೆ.

Vijayaprabha Mobile App free

ಆಯುರ್ವೇದ ಔಷಧ ಮತ್ತು ಶಸ್ತ್ರಚಿಕಿತ್ಸೆ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ವಿಸ್ಮಯ 2020ರಲ್ಲಿ ಮೋಟಾರು ವಾಹನ ವಿಭಾಗದ ಅಧಿಕಾರಿಯಾಗಿದ್ದ ಎಸ್​. ಕಿರಣಕುಮಾರ್​​ ಜೊತೆ ಸಪ್ತಪದಿ ತುಳಿದಿದ್ದರು. ಮದುವೆ ಸಮಯದಲ್ಲಿ 1 ಎಕರೆ ಜಮೀನು ಮತ್ತು ಕಾರನ್ನು ವರದಕ್ಷಿಣೆ ರೂಪದಲ್ಲಿ ನೀಡಿತ್ತು. ಆದರೆ ಇದರಿಂದ ತೃಪ್ತಿಯಾಗದ ಪತಿ ಕಿರಣಕುಮಾರ್​ ತನಗೆ ಕಾರಿನ ಬದಲಿಗೆ ಹಣ ನೀಡುವಂತೆ ಮೇಲಿಂದ ಮೇಲೆ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿ ಬಂದಿದ್ದು, ಮಹಿಳೆ ಮೇಲೆ ಹಲ್ಲೆ ನಡೆಸಲಾಗಿರುವ ಫೋಟೋ ಸಹ ವೈರಲ್​ ಆಗಿದ್ದು, ಮಹಿಳಾ ಆಯೋಗ ಕೂಡ ಪ್ರಕರಣ ದಾಖಲು ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.