ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ ಹೊರಟ್ಟಿ (Basavaraj Horatti) ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದು ಬೀಗಿದ ಬಸವರಾಜ ಹೊರಟ್ಟಿ ಗೆಲುವಿನ ನಗು ಬೀರಿದ್ದಾರೆ.
ಬಸವರಾಜ ಹೊರಟ್ಟಿಯ ದಿಗ್ವಿಜಯದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ್ ಗುರಿಕಾರ, ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀಶೈಲ ಗಿಡದಿನ್ನಿ ಅವರಿಗೆ ತೀವ್ರ ಮುಖಭಂಗವಾಗಿದೆ. ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದು, 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.




