ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡುವ ಬಗ್ಗೆ ನಾಳೆಯಿಂದ (ಫೆ.14) ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಗ್ರಾಹಕರಿಂದ ಅಹವಾಲು ಸ್ವೀಕರಿಸಲಿದೆ.
ಹೌದು, ನಷ್ಟದ ಹಿನ್ನೆಲೆ, ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕೆಇಆರ್ಸಿಗೆ ಎಸ್ಕಾಂಗಳು ಪ್ರಸ್ತಾವ ಸಲ್ಲಿಸಿದ್ದು, ಅದನ್ನು ಕೆಇಆರ್ಸಿ ಪರಿಶೀಲಿಸಿದ ನಂತರ ಏಪ್ರಿಲ್, ಮೇ ತಿಂಗಳಲ್ಲಿ ದರ ಪರಿಷ್ಕರಿಸಬಹುದು ಎನ್ನಲಾಗಿದೆ.
ಇನ್ನು, ಕಳೆದ ವರ್ಷ ಯೂನಿಟ್ ವೊಂದಕ್ಕೆ ಎಸ್ಕಾಂಗಳು 1.35 ರೂ.ಹೆಚ್ಚಿಸುವಂತೆ ಪ್ರಸ್ತಾವ ಸಲ್ಲಿಸಿದ್ದವು, ಆದರೆ, ಕೆಇಆರ್ಸಿ ಯೂನಿಟ್ ವೊಂದಕ್ಕೆ 30 ಪೈಸೆ ಹೆಚ್ಚಿಸಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.