ಹುಬ್ಬಳ್ಳಿ : ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಹತ್ಯೆಗೆ 3 ತಿಂಗಳ ಮೊದಲೇ ಸಂಚು ರೂಪಿಸಿ, ಸಾರ್ವಜನಿಕವಾಗಿಯೇ ಅವರನ್ನು ಮುಗಿಸಲು ಪ್ಲಾನ್ ಮಾಡಲಾಗಿತ್ತು ಎಂದು ಪೊಲೀಸ್ ವಿಚಾರಣೆಯ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಕೊಲೆಗೂ 2 ದಿನ ಮುನ್ನ ಆರೋಪಿಗಳು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯನ್ನು ನಿರಂತರವಾಗಿ ಭೇಟಿಯಾಗಿದ್ದರು. ಬೆಂಗಳೂರಿನಲ್ಲಿ ಗುರೂಜಿಯನ್ನು ಕೊಲೆ ನಡೆಸಲು ಪ್ಲಾನ್ ಮಾಡಲಾಗಿತ್ತು.
ಆದರೆ, ಚಂದ್ರಶೇಖರ ಗುರೂಜಿಯ ಸಹೋದರನ ಮೊಮ್ಮಗ ತೀರಿಕೊಂಡಿದ್ದರಿಂದ ಕೊಲೆಯ ಸಮಯ ಮತ್ತು ಸ್ಥಳ ಬದಲಾಗಿದೆ ಎಂದು ಆರೋಪಿಗಳು ಸ್ಪೋಟಕ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.