Farmer loan waiver | ಸಾಲ ಮನ್ನಾ ಆಗುತ್ತಾ? ಇಲ್ವಾ? ಎಂಬ ಗೊಂದಲದಲ್ಲಿರುವವರಿಗೆ ಭರವಸೆಯ ಸುದ್ದಿಯೊಂದು ಹೊರಬಿದ್ದಿದೆ. ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಎಂ ಗುಡ್ ನ್ಯೂಸ್ ನೀಡಿದ್ದಾರೆ. ಸಾಲ ಮನ್ನಾ ಬಗ್ಗೆ CM ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬೆಳೆ ಹಾನಿಯಿಂದಾಗಿ ರೈತರು ಸಾಲ ಮನ್ನಾ ಮಾಡುವಂತೆ ಮನವಿ ಮಾಡುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಜಂಟಿ ಸಮೀಕ್ಷೆ ನಡೆಸುತ್ತೇವೆ. ವಾರದಲ್ಲಿ ಸಮೀಕ್ಷೆಯ ಅಂತಿಮ ವರದಿ ಬಂದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು’ ಎಂದಿದ್ದಾರೆ.
ಕಳೆದ ಬಾರಿ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಪರಿಹಾರ ನೀಡದಿದ್ದಾಗ ಸುಪ್ರೀಂ ಕೋರ್ಟ್ ಮೂಲಕ ಪಡೆದಿದ್ದಾಗಿ ತಿಳಿಸಿದ ಸಿಎಂ, ಈ ಬಾರಿ ಹೆಚ್ಚಿನ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಮನವಿ ಮಾಡಿದ್ದರೂ ಸ್ಪಂದನೆ ದೊರೆತಿಲ್ಲ ಎಂದರು.




