ಕೇಂದ್ರದಿಂದ ಗುಡ್​​ನ್ಯೂಸ್: ಇನ್ನೂ 3 ತಿಂಗಳು ಉಚಿತ ಆಹಾರ ಮತ್ತು ಧಾನ್ಯ ವಿತರಣೆ ಯೋಜನೆ ವಿಸ್ತರಣೆ..!?

ಕೋವಿಡ್ ಸಮಯದಲ್ಲಿ ಜಾರಿ ಮಾಡಲಾಗಿದ್ದ ಗರೀಬ್ ಕಲ್ಯಾಣ ಯೋಜನೆಯ ಉಚಿತ ಆಹಾರ ಮತ್ತು ಧಾನ್ಯ ವಿತರಣೆ ಯೋಜನೆಯನ್ನು ಇನ್ನೂ 3 ತಿಂಗಳು ವಿಸ್ತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೌದು, ಈ ಬಗ್ಗೆ ಆಹಾರ…

rationers vijayaprabha

ಕೋವಿಡ್ ಸಮಯದಲ್ಲಿ ಜಾರಿ ಮಾಡಲಾಗಿದ್ದ ಗರೀಬ್ ಕಲ್ಯಾಣ ಯೋಜನೆಯ ಉಚಿತ ಆಹಾರ ಮತ್ತು ಧಾನ್ಯ ವಿತರಣೆ ಯೋಜನೆಯನ್ನು ಇನ್ನೂ 3 ತಿಂಗಳು ವಿಸ್ತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಹೌದು, ಈ ಬಗ್ಗೆ ಆಹಾರ ಸಚಿವಾಲಯ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದು, ಜನವರಿವರೆಗೂ ವಿಸ್ತರಿಸಲು ಮನವಿ ಮಾಡಲಾಗಿದೆ ಎನ್ನಲಾಗ್ತಿದೆ. ಇದಕ್ಕೂ ಮೊದಲು ಈ ಯೋಜನೆ ಸೆಪ್ಟೆಂಬರ್ ಅಂತ್ಯಕ್ಕೆ ಕೊನೆಯಾಗುವಂತೆ ಸೂಚಿಸಲಾಗಿತ್ತು. ಆದರೆ ಆಹಾರ ಸಚಿವಾಲಯ ಈ ಯೋಜನೆಯನ್ನು ಮುಂದುವರೆಸಲು ಆಸಕ್ತಿ ತೋರಿದ್ದು, ಕೇಂದ್ರವೂ ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿದೆ ಎನ್ನಲಾಗ್ತಿದೆ.

ಸರ್ಕಾರವು ಡಿಸೆಂಬರ್ ವರೆಗೆ 800 ಮಿಲಿಯನ್ ಜನರಿಗೆ ಉಚಿತ ಅಕ್ಕಿ ಅಥವಾ ಗೋಧಿ ನೀಡುವುದನ್ನು ಮುಂದುವರಿಸಬಹುದು. ಪ್ರಸ್ತುತ ಸೆಪ್ಟೆಂಬರ್ ಅಂತ್ಯಕ್ಕೆ ಈ ಯೋಜನೆ ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ ನಲ್ಲಿ ಸರಣಿ ಹಬ್ಬಗಳು ಹಾಗೂ ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಇರೋದ್ರಿಂದ ಈ ಯೋಜನೆ ವಿಸ್ತರಣೆ ಸಾಧ್ಯತೆ ಇದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.