BIG NEWS: ಮತ್ತೆ ಒಂದು ವಾರ ಸಂಪೂರ್ಣ ಲಾಕ್ ಡೌನ್: ನಾಳೆ, ನಾಡಿದ್ದು ಮಾತ್ರ ದಿನಸಿ ಖರೀದಿಗೆ ಅವಕಾಶ

ಕೊಪ್ಪಳ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯಾದ್ಯಂತ ಮೇ 24ರಿಂದ ಮುಂದಿನ 7 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್ ಹೇರಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಇಂದು ಆದೇಶ ನೀಡಿದ್ದಾರೆ. ಇಂದು ಜಿಲ್ಲಾಧಿಕಾರಿ…

ಕೊಪ್ಪಳ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯಾದ್ಯಂತ ಮೇ 24ರಿಂದ ಮುಂದಿನ 7 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್ ಹೇರಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಇಂದು ಆದೇಶ ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಸುದ್ದಿಗಾರರೊಂದಿದೆ ಮಾತನಾಡಿ, ಲಾಕ್ ಡೌನ್ ವಿಸ್ತರಣೆ ಕುರಿತಂತೆ ಮಾಹಿತಿ ನೀಡಿದ್ದು, ಮುಂದಿನ ಎರಡು ದಿನಗಳು ಶನಿವಾರ ಮತ್ತು ಭಾನುವಾರ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಲಾಕ್ ಡೌನ್ ಜಾರಿ ಇರಲಿದ್ದು, ಅನಂತರ ಸೋಮವಾರದಿಂದ 7 ದಿನಗಳ ಕಾಲ ಮೇ 24 ರಿಂದ ಮೇ 30 ರ ರಾತ್ರಿ 12 ಗಂಟೆ ವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಆಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ನಾಳೆ & ನಾಡಿದ್ದು ದಿನಸಿ ಖರೀದಿಗೆ ಅವಕಾಶ ಇರಲಿದ್ದು, ಸಾರ್ವಜನಿಕರು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಖರೀದಿಸಬಹುದಾಗಿದ್ದು, ಕೋವಿಡ್ ನಿಯಮಗಳನ್ನು ಮೀರದಂತೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದು, ಇದನ್ನು ಹೊರತುಪಡಿಸಿದರೆ ಮೇ 31ರವರೆಗೆ ಯಾವುದೇ ದಿನಸಿ ಖರೀದಿಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಅವರು ಸ್ಪಷ್ಟಪಡಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.