ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi Yojana) 14 ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾಯುತ್ತಿದ್ದು, ಈ ಕಂತಿನ ದಿನಾಂಕವನ್ನು ಕೇಂದ್ರ ಸರ್ಕಾರ (Central Government) ಶೀಘ್ರ ಪ್ರಕಟಿಸುವ ನಿರೀಕ್ಷೆಯಿದೆ.
ಇದನ್ನು ಓದಿ: WhatsApp ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಡೌನ್ಲೋಡ್ ಮಾಡಿ
ಹೌದು, ಏಪ್ರಿಲ್ ಮತ್ತು ಜುಲೈ ನಡುವೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತಿನ ಹಣ ರಿಲೀಸ್ ಆಗುವ ಸಾಧ್ಯತೆಯಿದೆ. ಲಕ್ಷಾಂತರ ರೈತರ KYC ಅಪ್ಡೇಟ್ ಸರಿಯಾಗಿ ಆಗದೇ ಇದ್ದಿದ್ದರಿಂದ 13ನೇ ಕಂತು ಪಡೆದವರ ಸಂಖ್ಯೆ ಕಡಿಮೆಯಾಗಿತ್ತು. ಹೀಗಾಗಿ ಈ ಯೋಜನೆಗೆ ಮತ್ತೆ ಹೊಸದಾಗಿ ನೋಂದಾಯಿಸಿಕೊಳ್ಳಲು ರೈತರಿಗೆ ಅವಕಾಶ ನೀಡಲಾಗಿದ್ದು, ತಕ್ಷಣ ರಿಜಸ್ಟರ್ (Register) ಮಾಡಿಕೊಳ್ಳಿ.
ಇದನ್ನು ಓದಿ: ಸರ್ಕಾರದ ಮಹತ್ವದ ನಿರ್ಧಾರ, ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ಪಡಿತರ ಚೀಟಿ..!
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Samman Nidhi Yojana) ಕೇಂದ್ರ ಸರ್ಕಾರ ಮೂರೂ ಕಂತುಗಳಲ್ಲಿ 2,000 ರೂಗಳಂತೆ ವಾರ್ಷಿಕ 6000 ಮತ್ತು ರಾಜ್ಯ ಸರ್ಕಾರ ವಾರ್ಷಿಕ 4000 ರೂಗಳನ್ನು ರೈತರ ಖಾತೆಗೆ ಜಮೆ ಮಾಡುತ್ತದೆ.
ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಯೋಜನೆ; ರೈತರಿಗೆ 15 ಲಕ್ಷ ರೂ ನೀಡುತ್ತಿರುವ ಯೋಜನೆ ಇದೆ
ಹೊಸ ರೈತರು ನೊಂದಾಯಿಸುವುದು ಹೇಗೆ?
> ಪಿಎಂ ಕಿಸಾನ್ ವೆಬ್ಸೈಟ್ pmkisan.gov.inಗೆ ಲಾಗ್ಇನ್ ಆಗಿ.
> ವೆಬ್ಸೈಟ್ನ ಮಧ್ಯಭಾಗದಲ್ಲಿರುವ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕ್ಲಿಕ್ ಮಾಡಿ.
> ಆಧಾರ್ ನಂಬರ್, ಆಧಾರ್ ಜೊತೆ ಲಿಂಕ್ ಆಗಿರುವ ಮೊಬೈಲ್ ನಂ. ನಮೂದಿಸಿ.
> ಯಾವ ರಾಜ್ಯ ಎಂದು ಆಯ್ಕೆ ಮಾಡಿ CAPTCHA ಕೋಡ್ ಬರೆದು, OTP ಪಡೆಯಬೇಕು.
> ಇದಾದ ಬಳಿಕ ಪಿಎಂ ಕಿಸಾನ್ ಅರ್ಜಿ ಕಾಣುತ್ತದೆ. ಅದನ್ನು ಭರ್ತಿ ಮಾಡಿ ಕೊನೆಯಲ್ಲಿ ಸೇವ್ ಮಾಡಿ ಪ್ರಿಂಟ್ ಪಡೆಯಿರಿ.