GOOD NEWS: ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗೆ ಸಂತೋಷದ ಸುದ್ದಿ

ನವದೆಹಲಿ: ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರ ಸಂತೋಷದ ಸುದ್ದಿಯನ್ನು ನೀಡಿದ್ದು, ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ…

ನವದೆಹಲಿ: ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರ ಸಂತೋಷದ ಸುದ್ದಿಯನ್ನು ನೀಡಿದ್ದು, ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ಹೌದು, ಈ ಎರಡು ವ್ಯಾಪಾರ ವಲಯಗಳನ್ನು ಎಂಎಸ್‌ಎಂಇ ಎಂಬ ವ್ಯಾಖ್ಯಾನದಿಂದ ಹೊರಗೆ ಇರಿಸಲಾಗಿತ್ತು. ಆದರೆ ಈಗ ಪರಿಷ್ಕೃತ ಮಾರ್ಗಸೂಚಿ ಪರಿಷ್ಕರಿಸಿದ್ದು, ಪ್ರಕಾರ ಈ ಎರಡು ವಲಯದವರು ಕೂಡ ಆದ್ಯತೆಯ ಆಧಾರದಲ್ಲಿ ಸಾಲ ಪಡೆಯಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್‌ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗಲಿದ್ದು, ಈ ಮೂಲಕ ದೇಶದ 2.5 ಕೋಟಿ ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗೆ ಅನುಕೂಲವಾಗಲಿದ್ದು, ರಿಟೇಲ್ ಹಾಗೂ ಹೋಲ್​ಸೇಲ್​ ವಹಿವಾಟು MSME ವ್ಯಾಪ್ತಿಗೆ ಸೇರಿಸಲಾಗಿದೆ.

Vijayaprabha Mobile App free

ಪರಿಣಾಮವಾಗಿ ವ್ಯಾಪಾರಸ್ಥರು ಉದ್ಯಮ್ https://udyamregistration.gov.in/ ​ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.