ಅನ್ನದಾತರಿಗೆ ಒಳ್ಳೆಯ ಸುದ್ದಿ: ಸರ್ಕಾರದಿಂದ ರೈತರ ಬೆಳೆ ಸಾಲ ಮನ್ನಾ!

ಬೆಂಗಳೂರು: ಅಲ್ಪಾವದಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದ್ದು, ರಾಜ್ಯದ ರೈತರು ಸಹಕಾರ ಸಂಘ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಅಲ್ಪಾವಧಿ ಬೆಳೆ ಸಾಲ ಪಡೆದು, 2018ರ ಜುಲೈ 7ರೊಳಗೆ ಹೊರ…

Farmers vijayaprabha news

ಬೆಂಗಳೂರು: ಅಲ್ಪಾವದಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದ್ದು, ರಾಜ್ಯದ ರೈತರು ಸಹಕಾರ ಸಂಘ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಅಲ್ಪಾವಧಿ ಬೆಳೆ ಸಾಲ ಪಡೆದು, 2018ರ ಜುಲೈ 7ರೊಳಗೆ ಹೊರ ಬಾಕಿಯಲ್ಲಿ ಗರಿಷ್ಠ 1 ಲಕ್ಷ ರೂ.ವರೆಗಿನ ಅಲ್ಪಾವಧಿ ಸಾಲದ ಮೊತ್ತವನ್ನು ಮನ್ನಾ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ಹೌದು ಈ ಕುರಿತು ಮಾಹಿತಿ ನೀಡಿರುವ ಸಚಿವ ಎಸ್ ಟಿ ಸೋಮಶೇಖರ್ ಅವರು, ಮಾರ್ಚ್ ಅಂತ್ಯದೊಳಗೆ 295.15 ಕೋಟಿ ರೂ. ಮೊತ್ತವನ್ನು ನೆಫ್ಟ್‌ ಮೂಲಕ ಅರ್ಹ 57,229 ರೈತರ ಉಳಿತಾಯ ಖಾತೆಗಳಿಗೆ ವರ್ಗಾವಣೆ ಮಾಡಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದು, ಮಾರ್ಚ್ ಅಂತ್ಯದೊಳಗೆ ಸಾಲ ಮನ್ನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.