Good News: ಗೃಹಲಕ್ಷ್ಮೀ ಹಣ ಕೂಡಿಟ್ಟು ಬೋರ್‌ವೆಲ್ ಕೊರೆಸಿದ ಅತ್ತೆ-ಸೊಸೆ: ಸಿಎಂ ಮೆಚ್ಚುಗೆ

ಬೆಂಗಳೂರು: ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಒಟ್ಟುಗೂಡಿಸಿ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಸದ್ಬಳಕೆ ಮಾಡಿಕೊಂಡಿದ್ದಾರೆ. ಇಲ್ಲಿನ ಮಾಲ್ದಾರ್ ಕುಟುಂಬದ ಅತ್ತೆ ಮಾಬುಬೀ ಮತ್ತು ಸೊಸೆ…

ಬೆಂಗಳೂರು: ಗದಗ ಜಿಲ್ಲೆಯ ಗಜೇಂದ್ರಗಢ ಪಟ್ಟಣದ ಅತ್ತೆ, ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಒಟ್ಟುಗೂಡಿಸಿ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಸದ್ಬಳಕೆ ಮಾಡಿಕೊಂಡಿದ್ದಾರೆ.

ಇಲ್ಲಿನ ಮಾಲ್ದಾರ್ ಕುಟುಂಬದ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಅವರು ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಸುಮಾರು 44,000 ರೂ. ಹಣವನ್ನು ತಮ್ಮ 3 ಎಕರೆ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಬಳಕೆ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಕೊಳವೆ ಬಾವಿ ಕೊರೆಸಲು 60 ಸಾವಿರ ರೂಪಾಯಿ ಖರ್ಚಾಗಿದ್ದು, ಉಳಿದ ಹಣವನ್ನು ಅವರ ಪುತ್ರ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ತಮಗಾಗಿರುವ ಅನುಕೂಲವನ್ನು ಅತ್ತೆ, ಸೊಸೆ ಹೇಳಿಕೊಂಡಿದ್ದು, ಅತ್ತೆ-ಸೊಸೆ ಕಾರ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು. ಅತ್ತೆ-ಸೊಸೆ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.

Vijayaprabha Mobile App free

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ. ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ.” ಎಂದು ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.