ಬೆಂಗಳೂರು: ತಂಬಾಕು ನಿಷೇಧದ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರ್ಕಾರ, ವಾರದೊಳಗೆ ತಂಬಾಕು ಉತ್ಪನ್ನಗಳ ನಿಷೇಧದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲರಿಗೆ ವರದಿ ಸಲ್ಲಿಸಿದೆ.
ರಾಜ್ಯದಲ್ಲಿ ತಂಬಾಕು, ಗುಟ್ಕಾ ಉತ್ಪನ್ನಗಳ ನಿಷೇದ ಕುರಿತಂತೆ ರಾಜ್ಯಪಾಲರ ಜೊತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿ ಮಾಡಿದ ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ರಾಜ್ಯದಲ್ಲಿ ತಂಬಾಕು ನಿಷೇಧದ ಬಗ್ಗೆ ಸರ್ಕಾರ ಕೈಗೊಂಡಿರುವ ನಿರ್ಧಾರದ ಕುರಿತು ವರದಿ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.