ಬೆಂಗಳೂರು: ರಾಜ್ಯದತ್ಯಂತ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಹಿನ್ನೆಲೆ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದರ ಜೊತೆಗೆ ಬೆಂಗಳೂರು, ಮೈಸೂರು, ದಾವಣಗೆರೆ, ಯಾದಗಿರಿ ಸೇರಿದಂತೆ ಇನ್ನೂ ಹಲವು ಕಡೆ ಮಳೆಯಾಗಲಿದೆ ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 20 ಡಿಗ್ರಿ ಉಷ್ಣಾಂಶ ದಾಖಲಾಗಬಹುದು.




