ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ. ಚಳಿ ಹಾಗೂ ಮೋಡ ಕವಿದ ವಾತಾವರಣ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಉತ್ತರ ಭಾರತದಲ್ಲಿ ಮೈಕೊರೆಯುವ ಚಳಿ ಹೆಚ್ಚಾಗಲಿದ್ದು, ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಪ್ರಮುಖ ನಗರಗಳ ತಾಪಮಾನ:
ಬೆಂಗಳೂರು: 27-14, ಮಂಗಳೂರು: 33-12, ಶಿವಮೊಗ್ಗ: 32-16, ಬೆಳಗಾವಿ: 32-16, ಮೈಸೂರು: 27-13, ಮಂಡ್ಯ: 29-14, ಮಡಿಕೇರಿ: 27-13, ರಾಮನಗರ: 29-14, ಹಾಸನ: 28-14, ಚಾಮರಾಜನಗರ: 29-14, ಚಿಕ್ಕಬಳ್ಳಾಪುರ: 26-12, ಕೋಲಾರ: 26 14, ತುಮಕೂರು: 28-14, ಉಡುಪಿ: 34-21, ಕಾರವಾರ: 35-22, ಚಿಕ್ಕಮಗಳೂರು: 28-13, ದಾವಣಗೆರೆ: 31-16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.