ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ವರುಣ ಅಲ್ಪ ಬ್ರೇಕ್ ನೀಡಿದ್ದರೂ, ಸಂಪೂರ್ಣ ಕಡಿಮೆಯಾಗಿಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಜಿಲ್ಲೆಗಳಲ್ಲಿ…

rain-vijayaprabha-news

ರಾಜ್ಯದಲ್ಲಿ ವರುಣ ಅಲ್ಪ ಬ್ರೇಕ್ ನೀಡಿದ್ದರೂ, ಸಂಪೂರ್ಣ ಕಡಿಮೆಯಾಗಿಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ಜಿಲ್ಲೆಗಳಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆ ಕೊಂಚ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯ ಅಬ್ಬರ ಹೊರ ರಾಜ್ಯಗಳಲ್ಲಿಯೂ ಇದ್ದು, ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Vijayaprabha Mobile App free

ವಿವಿಧ ನಗರಗಳ ಹವಾಮಾನ ವರದಿ:

ಬೆಂಗಳೂರು: 27-18
ದಾವಣಗೆರೆ: 26-21
ಚಿತ್ರದುರ್ಗ: 26-21
ಹಾವೇರಿ: 26-21
ಬಳ್ಳಾರಿ: 30-23
ಗದಗ: 26-21
ಕೊಪ್ಪಳ: 28-22
ಮಂಗಳೂರು: 28-22
ಶಿವಮೊಗ್ಗ: 26-24
ಬೆಳಗಾವಿ: 23-22
ಮೈಸೂರು: 27-21
ಮಂಡ್ಯ: 28-21
ಕೊಡಗು: 21-17
ರಾಮನಗರ: 28-21
ಹಾಸನ: 23-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-19
ಕೋಲಾರ: 28-20
ತುಮಕೂರು: 27-20
ಉಡುಪಿ: 28-24
ಚಿಕ್ಕಮಗಳೂರು: 22-18
ರಾಯಚೂರು: 30-23
ಯಾದಗಿರಿ: 29-23
ವಿಜಯಪುರ: 28-22
ಬೀದರ್: 26-21
ಕಲಬುರಗಿ: 28-23
ಬಾಗಲಕೋಟೆ: 28-22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.