ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಭಾರೀ ಮಳೆ ಹಿನ್ನೆಲೆ, ಪಟ್ಟಣಂತಿಟ್ಟ, ಕೋಟಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು, ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡು, ಮಲಪ್ಪುರಂ, ಕೋಯಿಕೋಡ್ ಮತ್ತು ವಯನಾಡಿನಲ್ಲಿ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದ್ದು, ನಾಳೆ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ.
18 ಮಂದಿಯ ದಾರುಣ ಅಂತ್ಯ:
ಇನ್ನು, ಕೇರಳ ರಾಜ್ಯದಲ್ಲಿ ಧಾರಾಕಾರ ಮಳೆ ಮತ್ತು ಭೂಕುಸಿತದ ಪರಿಣಾಮ 18 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಕಾಣೆಯಾಗಿದ್ದಾರೆ. ಪಟ್ಟಣಂತಿಟ್ಟ, ಕೋಟಯಂ & ಇಡುಕ್ಕಿ ಜಿಲ್ಲೆಗಳಲ್ಲಿ ತೀವ್ರ ಹಾನಿಯಾಗಿದ್ದು, ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದಾದ ಸ್ಥಳಗಳಿಂದ ಜನರನ್ನು ಸ್ಥಳಾಂತರಿಸಲು ಅಲ್ಲಿನ ಸರ್ಕಾರ ಸೂಚಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.