ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, ಮಂಗಳವಾರದಿಂದ ಶುಕ್ರವಾರದ ವರೆಗೆ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿವಿಧ ನಗರಗಳ ಹವಾಮಾನ ವರದಿ:
ಬೆಂಗಳೂರು: 28-19, ಮಂಗಳೂರು: 28-24, ಶಿವಮೊಗ್ಗ: 27-21, ಬೆಳಗಾವಿ: 24-21, ಮೈಸೂರು: 28-20ಮಂಡ್ಯ: 29-20, ಕೊಡಗು: 22-18, ರಾಮನಗರ: 29-20 ಹಾಸನ: 24-19, ಚಾಮರಾಜನಗರ: 29-21ಕೊಪ್ಪಳ: 28-22 , ರಾಯಚೂರು: 29-20, ಯಾದಗಿರಿ: 29-23, ವಿಜಯಪುರ: 27-22, ಬೀದರ್: 26-21, ಕಲಬುರಗಿ: 28-22, ಬಾಗಲಕೋಟೆ: 28-22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.