ಹಿಜಾಬ್-ಕೇಸರಿ ಶಾಲು ವಿವಾದ: ಸರ್ಕಾರದಿಂದ ಮತ್ತೆ ರಜೆ ವಿಸ್ತರಣೆ; ಯಾರಿಗೆಲ್ಲಾ ರಜೆ?

ಬೆಂಗಳೂರು: ರಾಜ್ಯದಲ್ಲಿ ಬುಗಿಲೆದ್ದ ಹಿಜಾಬ್-ಕೇಸರಿ ಶಾಲು ವಿವಾದದಿಂದ ರಾಜ್ಯದ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ 3 ದಿನ ರಜೆ ನೀಡಲಾಗಿತ್ತು. ಇದೀಗ ಈ ರಜೆಯನ್ನು ಮತ್ತೆ ವಿಸ್ತರಿಸಲಾಗಿದೆ. ಹೌದು, ರಾಜ್ಯದಲ್ಲಿ ಹಿಜಾಬ್ – ಕೇಸರಿ ಶಾಲು…

ಬೆಂಗಳೂರು: ರಾಜ್ಯದಲ್ಲಿ ಬುಗಿಲೆದ್ದ ಹಿಜಾಬ್-ಕೇಸರಿ ಶಾಲು ವಿವಾದದಿಂದ ರಾಜ್ಯದ ಶಾಲಾ-ಕಾಲೇಜುಗಳಿಗೆ ರಾಜ್ಯ ಸರ್ಕಾರದಿಂದ 3 ದಿನ ರಜೆ ನೀಡಲಾಗಿತ್ತು. ಇದೀಗ ಈ ರಜೆಯನ್ನು ಮತ್ತೆ ವಿಸ್ತರಿಸಲಾಗಿದೆ.

ಹೌದು, ರಾಜ್ಯದಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ತಾರಕಕ್ಕೆರಿದ ಹಿನ್ನಲೆ ಫೆಬ್ರುವರಿ 8 ರಿಂದ 10 ರ ವರೆಗೆ ಸರ್ಕಾರ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಆದರೆ, ಸರ್ಕಾರ ಈ ರಜೆಯನ್ನು ಫೆಬ್ರುವರಿ 16ರವರೆಗೆ ವಿಸ್ತರಿಸಲಾಗಿದ್ದು, ವೈದ್ಯ ಕಾಲೇಜಿಗೆ ಇದು ಅನ್ವಯವಾಗುವುದಿಲ್ಲ. ಇನ್ನು ಪಿಯು ಕಾಲೇಜಿಗೆ ರಜೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ಇಂದು ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.