ಮಂಗಳೂರು: ಮಂಗಳೂರು ನಗರದ ಹೊರವಲಯ ಸುರತ್ಕಲ್ನಲ್ಲಿ ನಿನ್ನೆ ರಾತ್ರಿ ಮತ್ತೆ ಕತ್ತಿ ಝಳಪಿಸಿದ್ದು, ಒಬ್ಬನ ಕೊಲೆಯಾಗಿದ್ದು, ಈ ಹಿನ್ನೆಲೆ ನಗರದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಹೌದು, ಮುಂಜಾಗೃತಾ ಕ್ರಮವಾಗಿ ಇಂದು ನಗರದ ಸುರತ್ಕಲ್, ಪಣಂಬೂರು, ಮುಲ್ಕಿ, ಬಜಪೆ ಠಾಣಾ ವ್ಯಾಪ್ತಿಯ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರತ್ಕಲ್ ಮಾರುಕಟ್ಟೆ ಪ್ರದೇಶದಲ್ಲಿ ನಿನ್ನೆ ಫಾಸಿಲ್ ಎಂಬಾತನ ಮೇಲೆ ನಾಲ್ವರು ಮುಸುಕುಧಾರಿಗಳು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.