ದಾವಣಗೆರೆ: ಸಿಎಂ ಯಡಿಯೂರಪ್ಪ ಅವರ ಬದಲಾವಣೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂಪಿ ರೇಣುಕಾಚಾರ್ಯ ಅವರು ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಬೇಕು. ನನ್ನ ಬಳಿ 65ಕ್ಕೂ ಹೆಚ್ಚು ಶಾಸಕರ ಸಹಿ ಪತ್ರವಿದೆ ಎಂದು ಹೇಳಿಕೆ ನೀಡಿದ್ದಾರೆ.
ಹೌದು ಕುರಿತು ಮಾತನಾಡಿರುವ ಶಾಸಕ ಎಂಪಿ ರೇಣುಕಾಚಾರ್ಯ ಅವರು, ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಬೇಕು, ನನ್ನ ಬಳಿ 65ಕ್ಕೂ ಹೆಚ್ಚು ಶಾಸಕರ ಸಹಿ ಪತ್ರವಿದೆ. ಕೊರೋನಾ ಮುಗಿದ ಬಳಿಕ ಹೈಕಮಾಂಡ್ ಗೆ ಪತ್ರ ತಲುಪಿಸುತ್ತೇನೆ ಎಂದು ಇಂದು ತಿಳಿಸಿದ್ದಾರೆ.
ಇನ್ನು, ಮುಖ್ಯಮಂತ್ರಿಗಳೊಂದಿಗೆ ನಾವಿದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕೆಲವರಿಗೆ ಪಕ್ಕದ ಕ್ಷೇತ್ರವನ್ನು ಗೆಲ್ಲಿಸುವ ತಾಕತ್ತು ಇರುವುದಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ವಿಪಕ್ಷಗಳು ಸದ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಶಾಸಕ ರೇಣುಕಾಚಾರ್ಯ ಆರೋಪಿಸಿದ್ದಾರೆ.