ರಾಜಧಾನಿಯಲ್ಲಿ ಮಳೆ ಕಡಿಮೆಯಾದರೂ ಸಹಜ ಸ್ಥಿತಿಗೆ ಬರದ ಜನರ ಬದುಕು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಪ್ರಮಾಣ ಸ್ವಲ್ಪ ಗ್ಗಿದ್ದರೂ ಕಳೆದೆರಡು ದಿನ ಸುರಿದ ಅಬ್ಬರದ ಮಳೆಯಿಂದ ತೊಂದರೆಗೆ ಸಿಲುಕಿದ ಜನರ ಬದುಕು ಸಹಜ ಸ್ಥಿತಿಗೆ ಬರುತ್ತಿಲ್ಲ. ಹೌದು, ಕಳೆದ ಎರಡ್ಮೂರು ದಿನದಿಂದ ಸುರಿದ ಮಳೆಗೆ…

Heavy rain alert

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಪ್ರಮಾಣ ಸ್ವಲ್ಪ ಗ್ಗಿದ್ದರೂ ಕಳೆದೆರಡು ದಿನ ಸುರಿದ ಅಬ್ಬರದ ಮಳೆಯಿಂದ ತೊಂದರೆಗೆ ಸಿಲುಕಿದ ಜನರ ಬದುಕು ಸಹಜ ಸ್ಥಿತಿಗೆ ಬರುತ್ತಿಲ್ಲ.

ಹೌದು, ಕಳೆದ ಎರಡ್ಮೂರು ದಿನದಿಂದ ಸುರಿದ ಮಳೆಗೆ ನಗರದ ಯಲಹಂಕ, ದಾಸರಹಳ್ಳಿ, ಮಹದೇವಪುರ ಸುಮಾರು 45ಕ್ಕೂ ಅಧಿಕ ತಗ್ಗು ಪ್ರದೇಶದ ಲೇಔಟ್‌ಗಳು ಜಲಾವೃತಗೊಂಡು ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ಈ ಪೈಕಿ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌, ಟಾಟಾ ನಗರ, ಮಹದೇವಪುರದ ಸಾಯಿಲೇಔಟ್‌ ಹಾಗೂ ವಡ್ಡರಪಾಳ್ಯ ಹೊರತು ಪಡಿಸಿ ಉಳಿದ ಬಡಾವಣೆಗಳ ನೀರು ಬುಧವಾರ ತೆರವುಗೊಂಡಿದೆ.

ನೀರು ಕಡಿಮೆಯಾಗುತ್ತಿದಂತೆ ನಿವಾಸಿಗಳು ಮನೆಗಳನ್ನು ಸ್ವಚ್ಛಗೊಳಿಸುವುದರಲ್ಲಿ ನಿರತರಾಗಿದ್ದರು. ಬಟ್ಟೆ, ಹಾಸಿಗೆ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಬಿಸಿಲಿನಲ್ಲಿ ಒಣಗಿಸಿಕೊಳ್ಳುವುದಕ್ಕೆ ಮುಂದಾದರು. ಉಳಿದಂತೆ ವಾಟರ್‌ ಪಂಪ್‌, ಟಿವಿ, ಫ್ರಿಡ್ಜ್‌, ವಾಷಿಂಗ್‌ ಮಿಷನ್‌, ಮಿಕ್ಸಿ ಸೇರಿದಂತೆ ಎಲೆಕ್ಟ್ರಾನಿಕ್‌ ಉಪಕರಣಗಳ ದುರಸ್ತಿಗೆ ತೆಗೆದುಕೊಂಡು ಹೊರಟ್ಟಿದ್ದರು.

Vijayaprabha Mobile App free

ನೀರು ಶೇಖರಣೆ ಮಾಡುವ ತೊಟ್ಟಿಯಲ್ಲಿ ತುಂಬಿಕೊಂಡಿದ್ದ ಕೊಳಚೆ ನೀರನ್ನು ಜನರು ಸ್ವಚ್ಛಗೊಳಿಸುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಕುಡಿಯಲು ಮಿನರಲ್‌ ವಾಟರ್‌, ಹೋಟೆಲ್‌ನಿಂದ ಊಟ ತೆಗೆದುಕೊಂಡು ಬರಲಾಗುತ್ತಿತ್ತು. ರಸ್ತೆ ಸೇರಿದಂತೆ ನೆಲ ಮಹಡಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್‌, ಕಾರು, ಆಟೋ ಸೇರಿದಂತೆ ಮೊದಲಾದ ವಾಹನಗಳು ನೀರಿನಲ್ಲಿ ಮುಳುಗಿದ್ದರಿಂದ ವಾಹನಗಳಲ್ಲಿ ಭಾರೀ ಪ್ರಮಾಣ ಕೆಸರು ತುಂಬಿಕೊಂಡಿತ್ತು. ಬುಧವಾರ ಅವುಗಳ ಸ್ವಚ್ಚಗೊಳಿಸುವ ಕಾರ್ಯ ನಡೆಸುತ್ತಿರುವುದು ಕಂಡು ಬಂತು. ಕೆಲವು ವಾಹನಗಳನ್ನು ಬೇರೆಗೆ ಎಳೆದುಕೊಂಡು ಹೋಗಿ ರಿಪೇರಿ ಮಾಡಿಸಬೇಕಾಯಿತು.

ಹೊರಗೆ ಹೆಜ್ಜೆ ಇಡಲು ಜನರ ನಿರಾಸಕ್ತಿ:

ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಸ್ವಲ್ಪ ಪ್ರಮಾಣದಲ್ಲಿ ನೀರಿನ ಮಟ್ಟ ಕಡಿಮೆಯಾಗಿತ್ತು. ಈ ನಡುವೆ ಅಪಾರ್ಟ್‌ಮೆಂಟ್‌ ನಿವಾಸಿಗಳನ್ನು ಸ್ಥಳಾಂತರಿಸುವ ಕಾರ್ಯ ಬುಧವಾರ ಮುಂದುವರೆದಿತ್ತು. ಆದರೆ, 30 ಮನೆಯವರು ಮನೆಯಿಂದ ಸ್ಥಳಾಂತರಕ್ಕೆ ನಿರಾಸಕ್ತಿ ವ್ಯಕ್ತಪಡಿಸಿದರು. ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಸಿಬ್ಬಂದಿ ಮನೆ ಬಾಗಿಲು ಬಳಿ ನಿಂತು ಮನವೋಲಿಸುವ ಪ್ರಯತ್ನ ನಡೆಸಿದರು. ಇನ್ನೂ 27 ಪ್ಲಾಟ್‌ನಲ್ಲಿ ಜನರು ವಾಸವಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.