ಅಯ್ಯರ್, ಸ್ಯಾಮ್ಸನ್, ಜಡೇಜಾ ಭರ್ಜರಿ ಬ್ಯಾಟಿಂಗ್ : ಎರಡನೇ ಟಿ-20ಯಲ್ಲೂ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯ

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲೂ ಕೂಡ ಭಾರತ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಹೌದು, ಶ್ರೀಲಂಕಾ ನೀಡಿದ 184 ರನ್ ಗಳ…

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲೂ ಕೂಡ ಭಾರತ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ.

ಹೌದು, ಶ್ರೀಲಂಕಾ ನೀಡಿದ 184 ರನ್ ಗಳ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು. ಭಾರತದ ಪರ, ಇಶಾನ್ ಕಿಶನ್-16, ಸಂಜು ಸ್ಯಾಮ್ಸನ್-39, ಜಡೇಜಾ-45* & ಶ್ರೇಯಸ್ ಅಯ್ಯರ್-74* ರನ್ ಗಳಿಸಿದರು. ಲಂಕಾ ಪರ ಲಾಹಿರು-2, ದುಶ್ಮಂತ-1 ವಿಕೆಟ್ ಪಡೆದರು.

ಇನ್ನು, ಇದಕ್ಕು ಮುನ್ನ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಆರಂಭಿಕ ಆಟಗಾರರಾದ ಪಾಥುನ್ ನಿಸಂಕ 75, ಧನುಷ್ಕಾ ಗುಣತಿಲಕ 38 ರನ್ ಹಾಗು ನಾಯಕ ಡಾಸುನ್ ಶನಕ 47 ರನ್ ನೆರವಿನಿಂದ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು. ಭಾರತ ಪರ ಭುವನೇಶ್ವರ್ ಕುಮಾರ್, ಬುಮ್ರಾ, ಹರ್ಷಲ್ ಪಟೇಲ್, ಚಾಹಲ್ ಹಾಗು ಜಡೇಜಾ ತಲಾ 1 ಪಡೆದರು.

Vijayaprabha Mobile App free

ಟೀಮ್ ಇಂಡಿಯಾ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೇಯಸ್ ಅಯ್ಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.