ಬೆಂಗಳೂರು : ಕಾರ್ಮಿಕರ ರಾಜ್ಯ ವಿಮಾ ನಿಗಮವು ಇನ್ನು ಮುಂದೆ ಯಾವುದೇ ನೇಮಕಾತಿಗಳನ್ನಾದರೂ ಕೂಡ ಪ್ರಾದೇಶಿಕ ಭಾಷೆಗಳಲ್ಲೇ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳುವುದಾಗಿ ನಿಯಮಗಳಿಗೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯದ ಉದ್ಯೋಗಾಕಾಂಕ್ಷಿಗಳೂ ಕನ್ನಡದಲ್ಲೇ ಪರೀಕ್ಷೆ ಎದುರಿಸಬಹುದಾಗಿದೆ. ನಿಯಮಗಳಿಗೆ ತಿದ್ದುಪಡಿ ತರುವಂತೆ ಕೋರಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರಿಗೆ ಕಳೆದ ಡಿಸಂಬರ್ 27ರಂದು ಪತ್ರ ಬರೆದಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



