ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜನವರಿ 24 ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಆದೇಶಿಸಿದ್ದು, ಆದೇಶದಲ್ಲಿ ಶಾಲಾ ಆಡಳಿತ ಮಂಡಳಿಗಳು ಮಕ್ಕಳ ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮ ಅನುಸರಿಸಿ ತರಗತಿಗಳನ್ನು ನಡೆಸಬೇಕೆಂದು ಸೂಚಿಸಿದ್ದಾರೆ.
ಇನ್ನು ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಕೊರೋನಾ ಸೋಂಕು ಕಂಡುಬಂದ ಹಿನ್ನೆಲೆ ಶಾಲೆಗಳನ್ನು ಇಂದಿನವರೆಗೆ ಬಂದ್ ಮಾಡಲಾಗಿತ್ತು. ಸರ್ಕಾರವೂ ಕೂಡ ಶಾಲೆಗಳನ್ನು ತೆರೆಯುವ ಕುರಿತು ನಿನ್ನೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು. ಈ ಹಿನ್ನಲೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಜನವರಿ 24 ರಿಂದ ಶಾಲೆಗಳು ಪುನರ್ ಆರಂಭ ಮಾಡಲು ಆದೇಶ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.