ಬಜೆಟ್ 2026 ಹೈಲೈಟ್ಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿರುವ 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಿಗೆ ಸಿಂಹಪಾಲು ನೀಡಲಾಗಿದೆ. ಆರ್ಥಿಕ ಪ್ರಗತಿಯ ಪಥದಲ್ಲಿ ಸಾಗುತ್ತಿರುವ ಕರ್ನಾಟಕಕ್ಕೆ ಈ ಬಜೆಟ್ ಹೊಸ ದಿಕ್ಸೂಚಿ ನೀಡಿದೆ.
ಶಿಕ್ಷಣ ಮತ್ತು ಉದ್ಯೋಗ: 17,000 ಹುದ್ದೆಗಳ ಭರ್ತಿ
ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿಗೆ ಚಾಲನೆ.
ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಾತಿ.
ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಯಲು ‘ರೋಹಿತ್ ವೇಮುಲ ಕಾಯ್ದೆ’ ಜಾರಿ.
10 AI (ಕೃತಕ ಬುದ್ಧಿಮತ್ತೆ) ಪ್ರಯೋಗಾಲಯಗಳ ಸ್ಥಾಪನೆ.
ಆರೋಗ್ಯ ಕ್ಷೇತ್ರ: ಮಕ್ಕಳ ಸುರಕ್ಷತೆಗೆ ಆದ್ಯತೆ
ಸೋಶಿಯಲ್ ಮೀಡಿಯಾ ಬ್ಯಾನ್: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ.
18 ವರ್ಷದೊಳಗಿನ ಮಧುಮೇಹ ಪೀಡಿತ ಮಕ್ಕಳಿಗೆ ಉಚಿತ ಇನ್ಸುಲಿನ್ ವಿತರಣೆ.
ಆರೋಗ್ಯ ಇಲಾಖೆಯಲ್ಲಿ 2,500 ಹುದ್ದೆಗಳ ಬೃಹತ್ ನೇಮಕಾತಿ.
ಕಾರವಾರ ಮತ್ತು ಯಾದಗಿರಿಯಲ್ಲಿ ₹100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು.
ಕೃಷಿ ಮತ್ತು ಪಶುಸಂಗೋಪನೆ
| ಯೋಜನೆ | ವಿವರ |
|---|---|
| ಶೂನ್ಯ ಬಡ್ಡಿ ಸಾಲ | 38 ಲಕ್ಷ ರೈತರಿಗೆ ₹30,000 ಕೋಟಿ ಮೊತ್ತದ ಸಾಲ ವಿತರಣೆ ಗುರಿ. |
| ರೇಷ್ಮೆ ಸಬ್ಸಿಡಿ | ಸಾಗಾಣಿಕಾ ವೆಚ್ಚ ₹10 ರಿಂದ ₹20ಕ್ಕೆ ಏರಿಕೆ (ಡಬಲ್ ಸಬ್ಸಿಡಿ). |
| ಸಿಲ್ಕ್ ಪಾರ್ಕ್ | ರಾಮನಗರ, ಶಿಡ್ಲಘಟ್ಟ, ಹಾವೇರಿ ಸೇರಿದಂತೆ 5 ಕಡೆ ಸ್ಥಾಪನೆ. |
| ಪ್ರಾಣಿಗಳ ಸಿ.ಟಿ ಸ್ಕ್ಯಾನ್ | ಬೆಂಗಳೂರು ಮತ್ತು ಬೀದರ್ ಪಶು ಆಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ. |
ನಗರಾಭಿವೃದ್ಧಿ ಮತ್ತು ಸಾರಿಗೆ
ಬೆಂಗಳೂರಿನಲ್ಲಿ 158 ಕಿ.ಮೀ ಉದ್ದದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ.
ಈ ವರ್ಷ 41 ಕಿ.ಮೀ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ನಿರ್ಧಾರ.
1,250 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್ ನಿರ್ಮಾಣ.
ಸಾರಿಗೆ ನೌಕರರ ವೇತನ ಬಾಕಿ ಪಾವತಿಗೆ ₹1,271 ಕೋಟಿ ಮೀಸಲು.
ಇತರ ಪ್ರಮುಖ ಘೋಷಣೆಗಳು
ಶ್ರೀಮಾತಾ ವೈಷ್ಣೋದೇವಿ ಯಾತ್ರೆಗೆ ತೆರಳುವವರಿಗೆ ₹5,000 ಸಹಾಯಧನ.
ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳ ಸ್ಥಾಪನೆ.
ಬೆಳಗಾವಿಯಲ್ಲಿ 1,000 ಎಕರೆ ಪ್ರದೇಶದಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಅಭಿವೃದ್ಧಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



