ಕೋವಿಡ್ ಸಾಂಕ್ರಾಮಿಕದ ವೇಳೆ 2021ರಲ್ಲಿ ದೇಶದಲ್ಲಿ 10,881 ರೈತರು ಮತ್ತು ರೈತ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪಟ್ಟಿಯಲ್ಲಿ ಮಹಾರಾಷ್ಟ್ರ (ಶೇ 37.3%) ಮತ್ತು ಕರ್ನಾಟಕ (ಶೇ 19.9%) ಮೊದಲೆರಡು ಸ್ಥಾನಗಳಲ್ಲಿವೆ.
ಹೌದು, ರೈತರ ಆತ್ಮಹತ್ಯೆ ಪ್ರಕರಣಗಳ ವರದಿ ಬಿಡುಗಡೆ ಮಾಡಿರುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (NCRB) ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದ್ದು, ನಂತರದ 3 ಸ್ಥಾನಗಳಲ್ಲಿ ಕ್ರಮವಾಗಿ ಆಂಧ್ರಪ್ರದೇಶ (ಶೇ 9.8), ಮಧ್ಯಪ್ರದೇಶ (ಶೇ 6.2) & ತಮಿಳುನಾಡು (ಶೇ 5.5) ರಾಜ್ಯಗಳಿವೆ.
ಇನ್ನು, 11 ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ನಡೆದಿಲ್ಲ. ದಿನಗೂಲಿಗಳು (37,751), ಸ್ವ ಉದ್ಯೋಗಿಗಳು (18,803), ನಿರುದ್ಯೋಗಿಗಳು (11,724) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (NCRB) ವರದಿ ಹೇಳಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.