Danger Sea: ಸಮುದ್ರಕ್ಕೆ ಇಳಿಯುವ ಮುನ್ನ ಎಚ್ಚರ: ಕುಂದಾಪುರದಲ್ಲಿ ಯುವಕರಿಬ್ಬರು ನೀರುಪಾಲು!

ಕುಂದಾಪುರ: ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ಕುಂದಾಪುರ ತಾಲ್ಲೂಕಿನ ಬೀಜಾಡಿಯಲ್ಲಿ ನಡೆದಿದೆ. ಕುಂದಾಪುರ ಮೂಲದ ಅಜಯ್ ಹಾಗೂ ಬೆಂಗಳೂರಿನ ದಾಸರಹಳ್ಳಿ ಮೂಲದ ಸಂತೋಷ ನೀರುಪಾಲಾದ ದುರ್ದೈವಿ…

ಕುಂದಾಪುರ: ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ಕುಂದಾಪುರ ತಾಲ್ಲೂಕಿನ ಬೀಜಾಡಿಯಲ್ಲಿ ನಡೆದಿದೆ. ಕುಂದಾಪುರ ಮೂಲದ ಅಜಯ್ ಹಾಗೂ ಬೆಂಗಳೂರಿನ ದಾಸರಹಳ್ಳಿ ಮೂಲದ ಸಂತೋಷ ನೀರುಪಾಲಾದ ದುರ್ದೈವಿ ಯುವಕರಾಗಿದ್ದಾರೆ.

ನಾಲ್ವರೂ ಯುವಕರು ಬೆಂಗಳೂರಿನಿಂದ ಕುಂದಾಪುರಕ್ಕೆ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ್ದು ಬೀಜಾಡಿಯ ರೆಸಾರ್ಟ್‌ವೊಂದರಲ್ಲಿ ತಂಗಿದ್ದರು. ಬೆಳಿಗ್ಗೆ ನೀರಿನಲ್ಲಿ ಈಜಾಡುವ ಉದ್ದೇಶದಿಂದ ನಾಲ್ವರೂ ಸ್ನೇಹಿತರು ಸಮುದ್ರಕ್ಕೆ ಇಳಿದಿದ್ದು ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಯುವಕರು ಕೊಚ್ಚಿಹೋಗಿದ್ದಾರೆ. ಅದೃಷ್ಟವಶಾತ್ ನಾಲ್ವರ ಪೈಕಿ ಮೋಕ್ಷಿತ್ ಮತ್ತು ಶ್ರೀಯಾನ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಇಬ್ಬರ ಪೈಕಿ ಸದ್ಯ ಕುಂದಾಪುರದ ಅಜಯ್ ಮೃತದೇಹ ಮಾತ್ರ ಪತ್ತೆಯಾಗಿದೆ. ಇನ್ನೋರ್ವ ಯುವಕ ನೀರಿನಲ್ಲಿ ಕಣ್ಮರೆಯಾಗಿದ್ದು, ಅಲೆಗಳ ಅಬ್ಬರ ಹೆಚ್ಚಿದ್ದ ಹಿನ್ನಲೆ ನಾಪತ್ತೆಯಾಗಿರುವ ಸಂತೋಷನಿಗಾಗಿ ಹುಡುಕಾಟ ಮುಂದುವರೆದಿದೆ. ಸ್ಥಳಕ್ಕೆ  ಕುಂದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.