ಬಾಗಲಕೋಟೆ ಜಿಲ್ಲೆಯ ಇಳಕಲ್ ಸಮೀಪದ ಹಿರೇಕೊಡಗಲಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲಾರಿ ಹಾಗೂ ಟಂಟಂ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಹೌದು, ಇಳಕಲ್ನ ಶಾರದಾ (50) ಹಾಗೂ ಕೃಷ್ಣಾಪೂರ ಗ್ರಾಮದ ಅನಿತಾ (18) ಮೃತರು ಎಂದು ಗುರುತಿಸಲಾಗಿದ್ದು, ಇವರು ಅಮಾವಾಸ್ಯೆ ಅಂಗವಾಗಿ ಗೂಗಲ ಮರಿಯ ದುರ್ಗಮ್ಮ ದೇವಸ್ಥಾನಕ್ಕೆ ತೆರಳಿ ಮರಳುತ್ತಿರುವಾಗ ಈ ಅಪಘಾತ ನಡೆದಿದೆ.
ಇನ್ನು, ಚಾಲಕ ಸಹಿತ 6 ಮಂದಿ ಗಾಯಾಳುಗಳನ್ನು ನಗರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಹಿಂಬದಿಯಿಂದ ಬಂದ ಲಾರಿ ಟಂಟಂಗೆ ಡಿಕ್ಕಿ ಹೊಡೆದಿದ್ದು, ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




