Heartattack: ಕಬ್ಬಡ್ಡಿ ಆಟವಾಡುತ್ತಿದ್ದಾಗಲೇ ಆಟಗಾರನಿಗೆ ಹೃದಯ ಸ್ತಂಭನ!

ಮಂಡ್ಯ:  ಕಬಡ್ಡಿ ಆಡುವಾಗಲೇ ಆಟಗಾರನೋರ್ವ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ಧಾರುಣ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರೀತಮ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಹೆಬ್ರಿ ಮೂಲದವನಾಗಿದ್ದ ಪ್ರೀತಮ್ ಶೆಟ್ಟಿ…

ಮಂಡ್ಯ:  ಕಬಡ್ಡಿ ಆಡುವಾಗಲೇ ಆಟಗಾರನೋರ್ವ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ಧಾರುಣ ಘಟನೆ ಮಂಡ್ಯದ ನಾಗಮಂಗಲದಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರೀತಮ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲೆಯ ಹೆಬ್ರಿ ಮೂಲದವನಾಗಿದ್ದ ಪ್ರೀತಮ್ ಶೆಟ್ಟಿ ಹನುಮ ಜಯಂತಿ ಹಿನ್ನೆಲೆ ನಾಗಮಂಗಲದಲ್ಲಿ ಆಯೋಜಿಸಲಾಗಿದ್ದ ಕಬಡ್ಡಿ ಪಂದ್ಯದಲ್ಲಿ ಭಾಗಿಯಾಗಿದ್ದರು. ಆಟದಲ್ಲಿ ಭಾಗಿಯಾಗಿದ್ದಾಗಲೇ ಅವನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.

ನೋವಿನಿಂದ ಎದೆ ಹಿಡಿದುಕೊಂಡು ಕುಸಿದುಬಿದ್ದು ಅಸ್ವಸ್ಥಗೊಂಡ ಪ್ರೀತಮ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ತೀವ್ರ ಅಸ್ವಸ್ಥಗೊಂಡಿದ್ದ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.