ಮಂಡ್ಯ: ಮೂಕ ಮಹಿಳೆ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ವಿಕೃತಿ ಮೆರೆದಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಹೌದು ಏಪ್ರಿಲ್ 1ರಂದು ಜಾನುವಾರು ಮೇಯಿಸುತ್ತಿದ್ದ 48 ವರ್ಷದ ಮೂಕ ಮಹಿಳೆಯನ್ನು ಕೈಸನ್ನೆ ಮೂಲಕ ಹತ್ತಿರಕ್ಕೆ ಕರೆದ ಕಾಮುಕರು ಆಕೆಯನ್ನು ಹೊಂಗೆ ಮರದಡಿಗೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಇನ್ನು ದೂರು ನೀಡದಂತೆ ಆರೋಪಿಗಳ ಕುಟುಂಬಸ್ಥರು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬಕ್ಕೆ ಒತ್ತಡ ಕೂಡಾ ಹಾಕಿದ್ದು, ಪ್ರಸನ್ನ, ಶೇಖರ್, ಕವನ್ ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.