ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕರೋನ ಸೊಂಕು ದೃಢ

ಹೈದರಾಬಾದ್: ನಟ, ರಾಜಕಾರಣಿ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕರೋನ ಸೊಂಕು ದೃಢಪಟ್ಟಿದೆ. ತಮ್ಮ ಮುಂದಿನ ಆಚಾರ್ಯ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದ ಮೆಗಾಸ್ಟಾರ್ ಚಿರಂಜೀವಿ ಅವರಿಗೆಕರೋನ ಪಾಸಿಟಿವ್ ಎಂದು ದೃಢಪಟ್ಟಿದೆ. ಈ…

megastar chiranjeevi vijayaprabha news

ಹೈದರಾಬಾದ್: ನಟ, ರಾಜಕಾರಣಿ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕರೋನ ಸೊಂಕು ದೃಢಪಟ್ಟಿದೆ. ತಮ್ಮ ಮುಂದಿನ ಆಚಾರ್ಯ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದ ಮೆಗಾಸ್ಟಾರ್ ಚಿರಂಜೀವಿ ಅವರಿಗೆಕರೋನ ಪಾಸಿಟಿವ್ ಎಂದು ದೃಢಪಟ್ಟಿದೆ.

ಈ ವಿಷಯವನ್ನು ಮೆಗಾಸ್ಟಾರ್ ಚಿರಂಜೀವಿ ಅವರೇ ಸ್ವತಃ ಟ್ವೀಟ್ ಮಾಹಿತಿ ತಿಳಿಸಿದ್ದಾರೆ. ‘ಆಚಾರ್ಯ ಸಿನಿಮಾ ಶೂಟಿಂಗ್ ಪ್ರಾರಂಭಿಸಲು ಕೋವಿಡ್ ಪರೀಕ್ಷೆ ಒಳಗಾಗಿದ್ದು, ರಿಸಲ್ಟ್ ಪಾಸಿಟಿವ್ ಎಂದು ದೃಢಪಟ್ಟಿದೆ. ನನಗೆ ಯಾವುದೇ ಕೋವಿಡ್ ಲಕ್ಷಣಗಳಿಲ್ಲ. ನಾನು ತಕ್ಷಣ ಹೋಂ ಕ್ಯಾರೆಂಟೈನ್ ಆಗಿದ್ದೇನೆ. ಕಳೆದ 4-5 ದಿನಗಳಿಂದ ನನ್ನನ್ನು ಭೇಟಿಯಾದ ಪ್ರತಿಯೊಬ್ಬರೂ ಪರೀಕ್ಷೆಗೆ ಒಳಗಾಗಬೇಕೆಂದು ನಾನುವಿನಂತಿಸುತ್ತೇನೆ. ನನ್ನ ಆರೋಗ್ಯ ಸ್ಥಿತಿಯ ಬಗ್ಗೆ ಕಾಲಕಾಲಕ್ಕೆ ನಿಮಗೆ ಮಾಹಿತಿ ತಿಳಿಸುತ್ತೇನೆ ”ಎಂದು ಚಿರಂಜೀವಿ ಹೇಳಿದರು.

ನಟ ಮೆಗಾಸ್ಟಾರ್ ಚಿರಂಜೀವಿ ಮೂರು ದಿನಗಳ ಹಿಂದೆ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗೆ ಪ್ರವಾಹ ಪರಿಹಾರ ನೀಡಿದ್ದರು. ಅವರ ಜೊತೆ ನಟ ಅಕ್ಕಿನೇನಿ ನಾಗಾರ್ಜುನ ಇದ್ದರು. ಇನ್ನು ಭಾನುವಾರ ಚಿರಂಜೀವಿ ಟಿ ಆರ್ ಎಸ್ ಸಂಸದ ಸಂತೋಷ್ ಕುಮಾರ್ ಮತ್ತು ಅವರ ಪುತ್ರ ರಾಮ್‌ಚರಣ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.