ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ, ಈ ತಪ್ಪು ಮಾಡಿರುತ್ತಾರೆಂದು ಅನಿಸುತ್ತಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್, ‘ಅವರು ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ತಪ್ಪು ಮಾಡಿರುತ್ತಾರೆಂದು ಅನಿಸುತ್ತಿಲ್ಲ. ಇದೊಂದು ರಾಜಕೀಯ ಪಿತೂರಿ ಆಗಿದೆ’ ಎಂದು ಹೇಳಿದ್ದಾರೆ.
ಸದ್ಯ ಈ ಪ್ರಕರಣದ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆ ಆಗುವವರೆಗೂ ನೋಡೋಣ. ನಾನು ಜಾರಕಿಹೊಳಿ ಅವರ ಬೆಂಬಲಕ್ಕಿದ್ದೇನೆ. ಈ ವಿಚಾರದ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇವೆ ಎಂದು ಯೋಗೀಶ್ವರ್ ಹೇಳಿದರು