ಮನೆ ಇಲ್ಲದವರಿಗೆ ಇಲ್ಲಿದೆ ಗುಡ್ ನ್ಯೂಸ್…!

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ಜಿ ಕೆಟಗರಿ ಅಡಿಯಲ್ಲಿ ನಿವೇಶನ, ಮನೆಗಳನ್ನು ವಿತರಿಸಲಾಗುವುದು ಹಾಗೂ ಪ್ರಮುಖ ಪ್ರಶಸ್ತಿ ಪುರಸ್ಕೃತರು, ನ್ಯಾಯಾಧೀಶರು, ಕ್ರೀಡಾಪಟುಗಳು, ಪತ್ರಕರ್ತರು, ವಿಕಲಚೇತನರಿಗೆ ಶೇಕಡ 5 ರಷ್ಟು ಮನೆ, ನಿವೇಶನ ನೀಡಲು…

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ಜಿ ಕೆಟಗರಿ ಅಡಿಯಲ್ಲಿ ನಿವೇಶನ, ಮನೆಗಳನ್ನು ವಿತರಿಸಲಾಗುವುದು ಹಾಗೂ ಪ್ರಮುಖ ಪ್ರಶಸ್ತಿ ಪುರಸ್ಕೃತರು, ನ್ಯಾಯಾಧೀಶರು, ಕ್ರೀಡಾಪಟುಗಳು, ಪತ್ರಕರ್ತರು, ವಿಕಲಚೇತನರಿಗೆ ಶೇಕಡ 5 ರಷ್ಟು ಮನೆ, ನಿವೇಶನ ನೀಡಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.

ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ವಿ. ಸೋಮಣ್ಣ ಅವರು, ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಾಕಿ ಇದ್ದ 103 ಪ್ರಕರಣಗಳು ಇತ್ಯರ್ಥಗೊಂಡಿವೆ. 600 ಎಕರೆಯಷ್ಟು ಜಮೀನು ಮಂಡಳಿಯ ಸ್ವಾಧೀನಕ್ಕೆ ಬಂದಿದ್ದು, ಬಡಾವಣೆಗಳ ನಿರ್ಮಾಣಕ್ಕೆ ಇದ್ದ ತೊಡಕು ನಿವಾರಣೆಯಾಗಿದೆ ಎಂದು ಹೇಳಿದ್ದಾರೆ.

ಇನ್ನು, ಈ ವರ್ಷದ ಅಂತ್ಯಕ್ಕೆ ರಾಜ್ಯದ ವಿವಿದೆಡೆ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು. ಚನ್ನಗಿರಿ, ಮೈಸೂರು, ಬಾಗಲಕೋಟೆ, ಮುಂಡರಗಿ, ಗದಗ, ಹರಿಹರ, ನೆಲಮಂಗಲ, ಮಾದನಾಯಕನಹಳ್ಳಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು, 18 ಯೋಜನೆಗಳಿಗೆ ಡಿಪಿಆರ್ ಮಾಡಿ 16 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.