Annabhagya Yojana: 2 ತಿಂಗಳೂ ಸಿಗಲ್ಲ 5 ಕೆಜಿ ಅಕ್ಕಿ; ಈ ತಿಂಗಳು 5 ಕೆಜಿ ಅಕ್ಕಿ ಬದಲು ಹಣ!!

Annabhagya Yojana Annabhagya Yojana

Annabhagya Yojana: ಅನ್ನಭಾಗ್ಯ ವಿಚಾರದಲ್ಲಿ ಸರ್ಕಾರದ ಜತೆ ಸಂಘರ್ಷ ಉಂಟಾಗಿದೆ. ಈ ಸಂಘರ್ಷ ಇನ್ನೂ ಬಗೆಹರಿಯದ ಕಾರಣ ಅನ್ನಭಾಗ್ಯಕ್ಕೂ ಸಂಕಷ್ಟ ಎದುರಾಗಿದ್ದು, ಸದ್ಯದ ಪರಿಸ್ಥಿತಿ ನೋಡಿದರೆ ಇನ್ನೂ ಎರಡು ತಿಂಗಳು ಹೆಚ್ಚುವರಿ ಅಕ್ಕಿ ಸಿಗುವುದು ಕಷ್ಟ ಎಂಬಂತಾಗಿದೆ.

Annabhagya Yojana
Annabhagya Yojana

ಈ ತಿಂಗಳು ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವುದಿಲ್ಲ, ಅದರ ಬದಲಿಗೆ ಪಡಿತರದಾರರ ಖಾತೆಗೆ ಹಣ ಜಮೆ ಮಾಡಲಾಗುವುದು. ಆಗಸ್ಟ್​ -ಸೆಪ್ಟೆಂಬರ್​ನಲ್ಲೂ ಹೆಚ್ಚುವರಿ ಅಕ್ಕಿ ಸಿಗುವುದು ದೌಟು ಎಂದು ಆಹಾರ ಸಚಿವರ ಮಾತುಗಳಿಂದ ತಿಳಿದುಬಂದಿದೆ.

ಇದನ್ನು ಓದಿ: ಗ್ರಾಹಕರಿಗೆ ಮತ್ತೊಂದು ಶಾಕ್‌; ಟೊಮೆಟೊ ಆಯ್ತು, ಈಗ ಈ ಬೆಳೆಗೆ ಬಂಪರ್ ಬೆಲೆ!?

Advertisement

Annabhagya Yojana: ಮತ್ತೆ ಅಕ್ಕಿ ಬದಲು ಹಣ ? –ಆಹಾರ ಸಚಿವರು ಹೇಳಿದ್ದೇನು?

ಕೇಂದ್ರ ಸರ್ಕಾರವು ಹೆಚ್ಚುವರಿ 5 ಕೆಜಿ ಅಕ್ಕಿ ಪೂರೈಕೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅಕ್ಕಿ ಬದಲು ಖಾತೆಗೆ ಹಣವನ್ನ ಹಾಕಿದ್ದ ರಾಜ್ಯ ಸರ್ಕಾರ ಇದೀಗ ಈ ತಿಂಗಳು ಕೂಡ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಪಡಿತರ ಚೀಟಿದಾರರ ಖಾತೆಗಳಿಗೆ ಹಣ ಜಮಾ ಮಾಡಲಿದೆ.

ಇದನ್ನು ಓದಿ: ಮುಂದಿನ ನಾಲ್ಕು ದಿನ ಭಾರಿ ಮಳೆ; ಐಎಂಡಿ ಕೊಟ್ಟ ಎಚ್ಚರಿಕೆ ಸಂದೇಶವೇನು!?

ಈ ಬಗ್ಗೆಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮಾಹಿತಿ ನೀಡಿದ್ದು, ಈ ತಿಂಗಳು ಕೂಡ ಹೆಚ್ಚುವರಿ 5 ಕೆಜಿ ಬದಲು ಹಣ ನೀಡುತ್ತೇವೆ. ಸೆಪ್ಟೆಂಬರ್​ ತಿಂಗಳಿನಲ್ಲೂ ಕೂಡ ಹೆಚ್ಚುವರಿ ಅಕ್ಕಿ ಸಿಗುವುದು ಅನುಮಾನ. ಹೀಗಾಗಿ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಆದಷ್ಟು ಬೇಗ ಹೆಚ್ಚುವರಿ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ. ಹೆಚ್ಚುವರಿ 5 ಕೆಜಿ ಅಕ್ಕಿ ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಕೆಗೆ ನಿರಾಕರಿಸಿತ್ತು ಎಂದು ಹೇಳಿದ್ದಾರೆ.

Annabhagya Yojana: ಅಕ್ಕಿ ಬದಲು ಹಣ ನೀಡಬೇಡಿ: ವಿತರಕರ ಈ ಆಗ್ರಹವೇಕೆ?

1 ಕೆಜಿ ಅಕ್ಕಿಗೆ ವಿತರಕರಿಗೆ ₹1.24 ರೂ. ಕಮಿಷನ್ ಸಿಗುತ್ತದೆ. ಆದರೆ, ಅಕ್ಕಿ ಬದಲು ಹಣ ಕೊಟ್ರೆ ವರ್ಷಕ್ಕೆ 360 ಕೋಟಿ ರೂ. ಕಮಿಷನ್ ಸಿಗಲ್ಲ. 5 ಕೆಜಿಯಂತೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು 2.28 ಲಕ್ಷ ಮೆಟ್ರಿಕ್ ಟನ್‌ ವಿತರಕರಿಗೆ ತಿಂಗಳಿಗೆ ₹30 ಕೋಟಿ ಕಮಿಷನ್ ಆಗಿದ್ದು, ವರ್ಷಕ್ಕೆ ₹360 ಕೋಟಿ ಕಮಿಷನ್ ಸಿಗಲಿದೆ. ಅಕ್ಕಿ ಸಿಗದೇ ಇದ್ರೆ ಸಕ್ಕರೆ, ಎಣ್ಣೆ, ಬೇಳೆ, ಗೋಧಿ, ರಾಗಿ ನೀಡಿ ಎಂದು ವಿತರಕರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 22,260 ಪಡಿತರ ವಿತರಕರಿದ್ದಾರೆ.

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಗೊತ್ತಾ? ಹೀಗೆ ತಿಳಿದುಕೊಳ್ಳಿ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement