ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತಂತೆ, ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಇಂದು ಸವಾಲು ಹಾಕಿದ್ದಾರೆ.
ಈ ವೇಳೆ ಮಾತನಾಡಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಓರ್ವ 420 ನಾಯಕ. ಮೆಗಾ ಸಿಟಿಯಲ್ಲಿ ಏನೇನು ಹಗರಣ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಹೇಳಿದ್ದು, ನಾಯಕತ್ವ ಬದಲಾವಣೆ ಮಾಡಲು ಅವನ್ಯಾರು? ಒಂದು ವೇಳೆ ನಾಯಕತ್ವ ಬದಲಾವಣೆಯಾದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಯೋಗೇಶ್ವರ್ ಒಬ್ಬ ಕಳ್ಳ ಎಂದು ಕಿಡಿಕಾರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.