News of the week : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ಮು೦ದುವರೆದಿದ್ದು ರಾಜ್ಯದಲ್ಲಿ ಈ ವಾರ ನಡೆದ ಪ್ರಮುಖ ಸುದ್ದಿಗಳ ಮಾಹಿತಿ ಇಲ್ಲದೆ..
ಮಳೆಯ ಆರ್ಭಟ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಹಿಂಗಾರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಆದರೂ ಮಳೆಯ ಆರ್ಭಟ ಇನ್ನೂ ಮು೦ದುವರೆದಿದ್ದು,ಇನ್ನೂ ಕೆಲ ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕಟ್ಟಡ ಕುಸಿತ
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. 8 ಜನ ಸಾವನ್ನಪ್ಪಿದ್ದಾರೆ. 6 ಅಂತಸ್ತಿನ ಅಪಾರ್ಟ್ಮೆಂಟ್ನ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ: Gold price: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ; 10 ಗ್ರಾಂಗೆ ಚಿನ್ನದ ಬೆಲೆ ಮತ್ತೆ 710 ರೂ ಜಿಗಿತ !
ಹಾಸನಾಂಬೆಯ ದರ್ಶನ
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದರ್ಶನೋತ್ಸವ ಗುರುವಾರದಿಂದ ಆರಂಭಗೊಂಡಿದೆ. ಮದ್ಯಾಹ್ನ 12 ಗಂಟೆ 10 ನಿಮಿಷಕ್ಕೆ ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಇನ್ನು ನ.3 ರವರೆಗೆ ದೇವಾಲಯದ ಬಾಗಿಲು ಭಕ್ತರಿಗೆ ತೆರೆದಿಡಲಾಗುತ್ತದೆ.
ಕಿತ್ತೂರು ಉತ್ಸವಕ್ಕೆ ಚಾಲನೆ
ವೀರ ರಾಣಿ ಕಿತ್ತೂರು ಚೆನ್ನಮ್ಮನ ಐತಿಹಾಸಿಕ 200ನೇ ವಿಜಯೋತ್ಸವ ಕಿತ್ತೂರು ಉತ್ಸವ-2024ಕ್ಕೆ ಚಾಲನೆ ದೊರೆಯಿತು. ರಾಜ್ಯದಾದ್ಯಂತ ಸಂಚರಿಸಿ ತಂದ ವೀರ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಿತ್ತೂರಿನ ಚನ್ನಮ್ಮನ ವೃತ್ತದಲ್ಲಿ ಬರಮಾಡಿಕೊಂಡರು. ಬಳಿಕ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು.
ಯೋಗಿಶ್ವರ್ ಕಾಂಗ್ರೆಸ್ಗೆ
ರಾಜ್ಯ ರಾಜಕಾರಣದಲ್ಲಿ ಮಹತ್ತರವಾದ ತಿರುವು ಕಂಡುಬಂದಿದೆ. ಚುನಾವಣೆಯ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅ. 23ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.
ಸತೀಶ್ ಸೈಲ್ ಅರೆಸ್ಟ್
ರ್ನಾಟಕದಲ್ಲಿ ನಡೆದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬ೦ಧಿಸಿದ೦ತೆ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದ್ದು, ಕೋರ್ಟ್ ಸೂಚನೆಯ ಮೇರೆಗೆ ಸತೀಶ್ ಅವರನ್ನು ಬಂಧಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಳನ್ನು ಸಹ ನಡೆಸಲಾಗಿದೆ.
ಇದನ್ನೂ ಓದಿ: Jio Bharat | ಭರ್ಜರಿ ದೀಪಾವಳಿ ಆಫರ್; ಅಂಬಾನಿಯಿಂದ 4G ಫೋನ್ 700ರೂ.ಗಿಂತ ಕಡಿಮೆ ಬೆಲೆಗೆ!
ಕಾವೇರಿದ ಚನ್ನಪಟ್ಟಣ
ಹೈವೋಲ್ಟಜ್ ರಣಕಣವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿಂದ ಸಿಪಿ ಯೋಗೇಶ್ವರ ಅವರು ಕಣಕ್ಕಿಳಿದಿದ್ದು, ಭರ್ಜರಿ ರೋಡ್ ಶೋ ಮೂಲಕ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಎಲೆಕ್ಷನ್
ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಗೆ ಅ. 21ರಂದು ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ 1967 ಮತಗಳಿಂದ ಜಯ ಗಳಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್ಗೆ ಮುಖಭಂಗವಾಗಿದೆ.