ನವದೆಹಲಿ: ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ (ಡೇಟಾ) ಇಲ್ಲ. ಆದ್ದರಿಂದ ಪರಿಹಾರದ ಪ್ರಶ್ನೆಯೇ “ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ಸೋಮವಾರ ಸಂಸತ್ತಿನಲ್ಲಿ ಹೇಳಿದ್ದು, ವಿಪಕ್ಷಗಳ ಟೀಕೆ ಕಾರಣವಾಗಿದೆ.
ದೇಶಕ್ಕೆ ಕೊರೊನಾ ಸೋಂಕು ಹರಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿತ್ತು. ಉದ್ಯೋಗ ಕಳೆದುಕೊಂಡ ಲಕ್ಷಾಂತರ ಕಾರ್ಮಿಕರು ನಗರಪ್ರದೇಶಗಳಿಂದ ತಮ್ಮ ವಲಸೆ ತೆರಳಿದ್ದು, ಈ ವೇಳೆ ಹಲವರು ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದ್ದವು. ಮೃತ ವಲಸೆ ಕಾರ್ಮಿಕರಿಗೆ ನೀಡಿರುವ ಪರಿಹಾರದ ಕುರಿತು ಮಾಹಿತಿ ನೀಡುವಂತೆ ಲೋಕಸಭೆಯಲ್ಲಿ ನಡೆಯುತ್ತಿರುವ ಮಾನ್ಸೂನ್ ಅಧಿವೇಶನದ ಮೊದಲ ದಿನ ಸಭೆಯಲ್ಲಿ ಈ ಕುರಿತು ಸರ್ಕಾರ ಲಿಖಿತ ಉತ್ತರ ನೀಡಿದೆ.
ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ (ಡೇಟಾ) ಇಲ್ಲ. ಆದ್ದರಿಂದ ಪರಿಹಾರದ ಪ್ರಶ್ನೆಯೇ “ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಸರ್ಕಾರ ಹೇಳಿದೆ. ಸದ್ಯ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ವಿದೇಶಕ್ಕೆ ತೆರಳಿರುವ ರಾಹುಲ್ ಗಾಂಧಿ ಕೂಡ ಈ ಕುರಿತು ಟೀಕಿಸಿದ್ದಾರೆ.
“ನೀವು ಎಣಿಸದಿದ್ದರೆ, ವಲಸೆ ಕಾರ್ಮಿಕರ ಸಾವುಗಳು ನಡೆದಿಲ್ಲವೇ?” ಎಂದು ಟೀಕಿಸಿ ಮಂಗಳವಾರ ಟ್ವೀಟ್ ಮಾಡಿದ್ದಾರೆ.
मोदी सरकार नहीं जानती कि लॉकडाउन में कितने प्रवासी मज़दूर मरे और कितनी नौकरियाँ गयीं।
तुमने ना गिना तो क्या मौत ना हुई?
हाँ मगर दुख है सरकार पे असर ना हुई,
उनका मरना देखा ज़माने ने,
एक मोदी सरकार है जिसे ख़बर ना हुई।— Rahul Gandhi (@RahulGandhi) September 15, 2020