ಹಾವೇರಿ : ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಶ್ರೀಗಳು ಮಾತನಾಡಿದ್ದು, ಮಕರ ಸಂಕ್ರಾಂತಿಯ ದಿನ ಸೂರ್ಯ ತನ್ನ ದಿಕ್ಕನ್ನು ಬದಲಿಸುತ್ತಾನೆ. ಅದೇ ದಿನ ಕುರುಬರ ದಿಕ್ಕು ಕೂಡ ಬದಲಾಗಲಿದೆ ಎಂದಿದ್ದಾರೆ.
ಈ ವೇಳೆ, ನಮ್ಮ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂದು ಆಗ್ರಹಿಸುವ ಬಗ್ಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದೇನೆ. ಹೋರಾಟದ ಮೊದಲ ಹಂತವಾಗಿ ನವೆಂಬರ್ 8ರಂದು ಮಹಿಳಾ ಸಮಾವೇಶ ನಡೆಸುತ್ತೇವೆ ಎಂದು ನಿರಂಜನಾನಂದಪುರಿ ಶ್ರೀಗಳು ಸ್ಪಷ್ಟಪಡಿಸಿದರು.
ಫೆ.7ರಂದು ಕುರುಬ ಸಮುದಾಯದ ಬೃಹತ್ ಸಮಾವೇಶ: ಈಶ್ವರಪ್ಪ
ಇನ್ನು ಸಚಿವ, ಕುರುಬ ಸಮುದಾಯದ ನಾಯಕ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿದ್ದು, ಮೈಸೂರು, ದಾವಣಗೆರೆ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಜಿಲ್ಲೆಗಳಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ ಆಯೋಜಿಸಲಿದ್ದು, ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ವೇಳೆ, ಜ.15ರಂದು ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹೊರಡಲಿದ್ದು, ಬೃಹತ್ ಸಮಾವೇಶ ಆಯೋಜಿಸಲಿದ್ದೇವೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.




