ರಾಜ್ಯದಲ್ಲಿ ಮಳೆ ಮತ್ತು ಬೆಲೆ ಕುಸಿತದಿಂದಾಗಿ ಕಂಗೆಟ್ಟಿರುವ ರೈತರು, ಈರುಳ್ಳಿ ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಈರುಳ್ಳಿ ದರ ಮತ್ತೆ ಗಗನಕ್ಕೇರಬಹುದು ಎಂದು ಅಂದಾಜಿಸಲಾಗಿದೆ.
ಹೌದು, ಪ್ರತಿವರ್ಷ ರಾಜ್ಯದಲ್ಲಿ ಕೃಷಿ ಇಲಾಖೆ ಗುರಿಗಿಂತ 3 ಪಟ್ಟು ಅಧಿಕ ರೈತರು, ಈರುಳ್ಳಿ ಬೆಳೆಯುತ್ತಿದ್ದರು. ಈ ಬಾರಿ 75% ರೈತರು ಈರುಳ್ಳಿ ಬೆಳೆಯಲು ಮನಸ್ಸು ಮಾಡಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದ್ದು, ಈರುಳ್ಳಿ ಅಭಾವ ತಪ್ಪಿಸಲು ಸರ್ಕಾರ, ಸೂಕ್ತ ಬೆಲೆ ನಿಗದಿಪಡಿಸಿ, ರೈತರ ಬೆಂಬಲಕ್ಕೆ ನಿಲ್ಲಬೇಕೆಂದು ಈರುಳ್ಳಿ ಬೆಳೆಗಾರರ ಸಂಘ ಒತ್ತಾಯಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.