ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳಿಗೆ ಸ್ವಂತ ಮನೆ ಕಟ್ಟುವ ತರಬೇತಿ ನೀಡುವ ಯೋಜನೆಗೆ ಪ್ರಾರಂಭಿಸಲು ಸರ್ಕಾರದಿಂದ ಸಿದ್ಧತೆ ಪ್ರಾರಂಭವಾಗಿದ್ದು, ಈ ಮೂಲಕ ರಾಜ್ಯದ 73 ತಾಲ್ಲೂಕುಗಳ ಜನರಿಗೆ ಪ್ರಯೋಜನ ಲಭ್ಯವಾಗಲಿದೆ.
ಹೌದು, ಪ್ರತಿ ತಾಲ್ಲೂಕಿನಿಂದ 30-40 ಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದ್ದು, ಇದರಲ್ಲಿ ಸ್ವತಃ ವಸತಿ ಫಲಾನುಭವಿಗಳು ಅಥವಾ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಳ್ಳಬಹುದು. ಆಯ್ಕೆಯಾದರಿಗೆ ಊಟೋಪಚಾರದೊಂದಿಗೆ ಪ್ರಯಾಣ ಭತ್ಯೆ 150 ರೂ. & 250 ರೂ. ತರಬೇತಿ ಭತ್ಯೆ ನೀಡಲಾಗುತ್ತದೆ.
ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ:
ಇನ್ನು, ಕೇಂದ್ರದ ಮಹತ್ವಕಾಂಕ್ಷೆಯ ಯೋಜನೆ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ’ ಯಡಿಯಲ್ಲಿ 18 ಲಕ್ಷ ಮನೆಗಳ ನಿರ್ಮಾಣವಾಗುತ್ತಿದ್ದು, ಈ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿನ ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ಯೋಜನೆಗಳಲ್ಲಿ ಮನೆಗಳ ನಿರ್ಮಾಣ ಕೈಗೊಂಡಿದ್ದು, ಸರ್ಕಾರದಿಂದ ಸಮಾನ ಮೊತ್ತವನ್ನು ನೀಡಲಾಗುವುದು ಎಂದರು.