ರಾಜ್ಯದಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದದಿಂದ ಸ್ಥಗಿತಗೊಂಡಿದ್ದ ಪಿಯುಸಿ ಮತ್ತು ಪದವಿ ಕಾಲೇಜುಗಳು ಕೋರ್ಟ್ ಆದೇಶದಂತೆ ಇಂದಿನಿಂದ (ಫೆ.16) ಪುನರ್ ಆರಂಭವಾಗಲಿವೆ.
ಇನ್ನು, ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕೆಂಬ ಹೈಕೋರ್ಟ್ ಸೂಚನೆಯಂತೆ ಕಾಲೇಜುಗಳನ್ನೂ ಆರಂಭಿಸಲಾಗುತ್ತಿದೆ. ಹೀಗಾಗಿ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸರ್ಕಾರ ತಿಳಿಸಿದೆ.
ಇನ್ನು, ರಾಜ್ಯದ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಲ್ಲಿ ಕೂಡ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದು, ಶಾಲಾ ಕಾಲೇಜುಗಳ 200ಮೀಟರ್ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇದಾಜ್ಞೆ ಹೇರಲಾಗಿದೆ.
ಇನ್ನು, ರಾಜ್ಯದಲ್ಲಿ ಈಗಾಗಲೇ ಸ್ಥಗಿತಗೊಂಡಿದ್ದ ಪ್ರೌಢಶಾಲೆಗಳು ರಾಜ್ಯದತ್ಯಂತ ಫೆಬ್ರುವರಿ 14ರಿಂದಲೇ ಪುನಾರಂಭಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.