ಬೆಂಗಳೂರಿನಲ್ಲಿ ನಿನ್ನೆಯಿಂದ ಶುರುವಾದ ಮಳೆ, ಇನ್ನೂ ಐದು ದಿನಗಳ ಕಾಲ ಸುರಿಯಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಶನಿವಾರ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ನೆರೆ ಉಂಟಾಗಿತ್ತು. ಆದರೆ, ನಿನ್ನೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಮೋಡ ಹಾಗೂ ಬಿಸಿಲಿನ ವಾತಾವರಣವಿತ್ತು. ಈ ಪ್ರದೇಶದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕೇವಲ ಬೆಂಗಳೂರು ಮಾತ್ರವಲ್ಲ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಸುರಿದಿರುವ ಮಳೆಯಿಂದ ಪ್ರವಾಹ ಭೀತಿ ಎದುರಾಗಿವೆ. ಹಾಗಾಗಿ ನದಿ ಪಾತ್ರದ ಜನರು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು, ಮುಂದಿನ 5 ದಿನಗಳ ಕಾಲ ಜಾಗ್ರತೆಯಿಂದ ಇರಬೇಕಾಗಿದೆ. ಇನ್ನು ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ವಿವಿಧ ನಗರಗಳ ಇಂದಿನ ತಾಪಮಾನ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 27-21
ಮೈಸೂರು: 27-21
ಮಂಡ್ಯ: 28-21
ಕೊಡಗು: 22-18
ರಾಮನಗರ: 29-24
ಹಾಸನ: 26-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 26-18
ಕೋಲಾರ: 28-21
ತುಮಕೂರು: 27-20
ಉಡುಪಿ: 28-24
ಕಾರವಾರ: 29-25
ಚಿಕ್ಕಮಗಳೂರು: 24-29
ದಾವಣಗೆರೆ: 28-22
ವಿಜಯಪುರ: 30-22
ಬೀದರ್: 28-22
ಕಲಬುರಗಿ: 29-23
ಬಾಗಲಕೋಟೆ: 31-22
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 30-23
ಗದಗ: 29-22
ಕೊಪ್ಪಳ: 29-22
ರಾಯಚೂರು: 31-24
ಯಾದಗಿರಿ: 31-24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.