ಚೆನ್ನೈ: ನಟ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು ಚೆನ್ನೈನ ಪೋಯೆಸ್ ಗಾರ್ಡನ್ ನ ತಮ್ಮ ನಿವಾಸದಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.
ಹೌದು, ರಜಿನಿ ಮಕ್ಕಳ್ ಮನ್ರಮ್ ಹೆಸರಿನ ರಾಜಕೀಯ ಪಕ್ಷವನ್ನು ಬರ್ಕಾಸ್ತುಗೊಳಿಸಿದ ನಟ ರಜಿನಿಕಾಂತ್ ಅವರು, ಅಭಿಮಾನಿಗಳ ಸಂಘವನ್ನು ಮಾತ್ರ ಉಳಿಸಿಕೊಂಡಿದ್ದಾರೆ.
ಈ ಕುರಿತು ಸೂಪರ್ ಸ್ಟಾರ್ ರಜಿನಿ ಕಾಂತ್ ಮಾತನಾಡಿ, ಭವಿಷ್ಯದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಉದ್ದೇಶವಿಲ್ಲ. ನಾವು ಯೋಚಿಸಿದ್ದನ್ನು ಮಾಡಲು ಸಮಯ ಸಿಗಲಿಲ್ಲ. ಯಾವುದೇ ಪರ, ವಿರೋಧ ತಂಡಗಳಿಲ್ಲದೆ ಜನರ ಕಲ್ಯಾಣಕ್ಕಾಗಿ ದುಡಿಯುವೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




