Ration card : ರಾಜ್ಯ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ್ದು, ಪಡಿತರದಲ್ಲಿ ತೊಗರಿ ಬೇಳೆ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು, ಗ್ರಾಹಕ ವ್ಯವಹಾರಗಳ ಹಾಗೂ ಸಾರ್ವಜನಿ ಪಡಿತರ ವಿತರಣಾ ಸಚಿವ ಕೆ.ಹೆಚ್. ಮುನಿಯಪ್ಪ (K.H. Muniyappa) ತಿಳಿಸಿದ್ದಾರೆ.
ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ರಾಜ್ಯದೆಲ್ಲೆಡೆ ಪಡಿತರದಲ್ಲಿ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಬೇಕು ಎಂದು ಬೇಡಿಕೆ ಕೇಳಿ ಬಂದಿದೆ.
ಇದನ್ನೂ ಓದಿ: ಇಂದು ಚಂದ್ರಗ್ರಹಣ ಈ 6 ರಾಶಿಯವರಿಗೆ ಅದ್ಬುತ ಫಲಿತಾಂಶ; ಇವರನ್ನು ತಡೆಯಲು ಸಾಧ್ಯವಿಲ್ಲ..!
Ration card : ತೊಗರಿ ಬೇಳೆ ವಿತರಣೆ..ರೈತರಿಗೂ ಅನುಕೂಲ
ಪಡಿತರದಲ್ಲಿ ತೊಗರಿ ಬೇಳೆ ವಿತರಿಸಬೇಕೆಂದು ಬೇಡಿಕೆ ಬಂದಿರುವ ಹಿನ್ನೆಲೆ ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಾಗುತ್ತಿದ್ದು,ಪಡಿತರದಲ್ಲಿ ತೊಗರಿ ಬೇಳೆ ಸೇರಿಸುವುದರಿಂದ, ಗ್ರಾಹಕರಿಗೂ ಹಾಗೂ ರೈತರಿಗೂ ಅನುಕೂಲವಾಗಲಿದೆ ಈ ಕುರಿತು ಚರ್ಚಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು, ಇದೇ ವೇಳೆ ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿಲ್ಲ. ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಕೂಡ ಯಾವ ನಿರ್ಬಂಧವೂ ಇಲ್ಲ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್: ಖಾತೆಗೆ ಜಮಾ ಆಯ್ತು 2 ತಿಂಗಳ ʼಗೃಹಲಕ್ಷ್ಮಿʼ ಹಣ