ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ: ಪಂಚಮಸಾಲಿ, ಕುರುಬ ಸಮುದಾಯಕ್ಕೆ ಸಿಗುವುದೇ ಸೌಲಭ್ಯ?; ಸಿಎಂ ಹೇಳಿವುದೇನು..?

ಬೆಂಗಳೂರು: ರಾಜ್ಯದಲ್ಲಿ ವಾಲ್ಮೀಕಿ‌ ಸಮುದಾಯದಮೀಸಲಾತಿಯನ್ನು ಹೆಚ್ಚಿಸಬೇಕೆಂದು, ಕುರುಬರನ್ನು ಎಸ್ಟೆಯಲ್ಲಿ ಸೇರಿಸಿಕೊಳ್ಳಬೇಕೆಂದು ಮತ್ತು ತಮ್ಮನ್ನು 2ಎ ಮೀಸಲಾತಿಗೆ ಸೇರಿಸಬೇಕೆಂದು ವೀರಶೈವ ಲಿಂಗಾಯತರು ಸಿಎಂ ಯಡಿಯೂರಪ್ಪ ಸರ್ಕಾರದ ಮೇಲೆ ಒತ್ತಡ ಹೇರಲು ತಿಂಗಳುಗಳಿಂದ ಪಾದಯಾತ್ರೆ ಮತ್ತು ರ್ಯಾಲಿಗಳನ್ನು…

Reservation-War-Karnataka-vijayaprabha-news

ಬೆಂಗಳೂರು: ರಾಜ್ಯದಲ್ಲಿ ವಾಲ್ಮೀಕಿ‌ ಸಮುದಾಯದಮೀಸಲಾತಿಯನ್ನು ಹೆಚ್ಚಿಸಬೇಕೆಂದು, ಕುರುಬರನ್ನು ಎಸ್ಟೆಯಲ್ಲಿ ಸೇರಿಸಿಕೊಳ್ಳಬೇಕೆಂದು ಮತ್ತು ತಮ್ಮನ್ನು 2ಎ ಮೀಸಲಾತಿಗೆ ಸೇರಿಸಬೇಕೆಂದು ವೀರಶೈವ ಲಿಂಗಾಯತರು ಸಿಎಂ ಯಡಿಯೂರಪ್ಪ ಸರ್ಕಾರದ ಮೇಲೆ ಒತ್ತಡ ಹೇರಲು ತಿಂಗಳುಗಳಿಂದ ಪಾದಯಾತ್ರೆ ಮತ್ತು ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಅಂತಿಮವಾಗಿ, ಸಚಿವರು ಕೂಡ ಆಯಾ ಸಮುದಾಯಗಳ ಸಭೆಗಳಲ್ಲಿ ಭಾಗವಹಿಸಿ ದ್ವನಿ ಎತ್ತುತ್ತಿದ್ದು ಸಿಎಂ ಯಡಿಯೂರಪ್ಪ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಲಿಂಗಾಯತ ಪಂಚಮಾಸಲಿ ಸಮುದಾಯವು ಕೆಲ ದಿನಗಳ ಹಿಂದೆ ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಸಿತು. ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ ಮತ್ತು ಬೆಳಗಾವಿಗಳಿಂದ ಸಾವಿರಾರು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದರು. ತಕ್ಷಣ ತಮ್ಮನ್ನು 3 ಬಿ ಯಿಂದ 2 ಎ ಗೆ ಬದಲಾಯಿಸಿ ಮೀಸಲಾತಿ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಪಂಚಮಸಾಲಿ ಸಮುದಾಯದ ನಾಯಕರು ಒತ್ತಾಯಿಸಿದರು. ಇಲ್ಲದಿದ್ದರೆ, ಮುಂಬರುವ ಚುನಾವಣೆಗಳು ತಕ್ಕ ಪಾಠ ಕಳಿಸುತ್ತೇವೆ ಎಂದು ಎಚ್ಚರಿಸಿದರು.

ಕೂಡಲ ಸಂಗಮ ಪಂಚಮಾಸಲಿ ಅಧ್ಯಕ್ಷರಾದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು, ರಾಜ್ಯ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ, ತಮ್ಮ ಸಮುದಾಯದ ಸ್ವಾಮೀಜಿಯವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಹೇಳಿದರು. ಕೃಷಿಯೇ ಜೀವನವಾಗಿರುವ ನಮಗೆ ಮೀಸಲಾತಿ ನೀಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ. ಸಭೆಯಲ್ಲಿ ಸಚಿವರಾದ ಮುರುಗೇಶ್ ನಿರಣಿ, ಸಿಸಿ ಪಾಟೀಲ್ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರು, ಸ್ವಾಮಿಗಳು ಭಾಗವಹಿಸಿದ್ದರು.

Vijayaprabha Mobile App free

ಕುರುಬ ಸಮುದಾಯ ಎಸ್ಟಿ ಮೀಸಲಾತಿಗೆ ಆಗ್ರಹಿಸಿದರೆ, ವಾಲ್ಮೀಕಿ ಸಮುದಾಯ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹ:

ಇನ್ನು ಕುರುಬ ಸಮುದಾಯವು ತಮ್ಮನ್ನು ಎಸ್ಟಿ ಮೀಸಲಾತಿಗೆ ಸೇರಿಬೇಕೆಂದು ಆಗ್ರಹಿಸಿ ಕಾಗಿನೆಲೆ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮಿಗಳ ನೇತೃತ್ವದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಸಿ ಬೆಂಗಳೂರಿನಲ್ಲಿ ಕುರುಬರ ಎಸ್ಟಿ ಮೀಸಲಾತಿ ಬೃಹತ್ ಜಾಗೃತಿ ಸಮಾವೇಶ ನಡೆಸಿದ್ದರು. ಈ ಸಮಾವೇಶದಲ್ಲಿ ಕುರುಬ ಸಮುದಾಯದ 10 ಲಕ್ಷಕ್ಕೂ ಹೆಚ್ಚಿನ ಸೇರಿದಂತೆ ನಾಯಕರಾದ ಸಚಿವ ಕೆ ಎಸ್ ಈಶ್ವರಪ್ಪ, ಎಂಟಿಬಿ ನಾಗರಾಜ್, ಆರ್ ಶಂಕರ್, ಎಚ್ ವಿಶ್ವನಾಥ್, ರೇವಣ್ಣ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿ ಎಸ್ಟಿ ಮೀಸಲಾತಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದರು.

ಇನ್ನು ವಾಲ್ಮೀಕಿ ಸಮುದಾಯದವರು ಕೂಡ ತಮಗೆ ಈಗಿರುವ ಎಸ್ಟಿ ಮೀಸಲಾತಿಯನ್ನು ಶೇಕಡಾ 7 ಕ್ಕೆ ಹೆಚ್ಚಿಸಬೇಕೆಂದು ಶ್ರೀ ಪ್ರಸನ್ನಾನಂದ ಪುರಿ ಸ್ವಾಮಿಗಳು ಸರ್ಕಾರಕ್ಕೆ ಒತ್ತಡ ಹೇರಿದ್ದಾರೆ. ಅಷ್ಟೇ ಅಲ್ಲದೆ ಸಚಿವ ಶ್ರೀರಾಮುಲು ಸೇರಿದಂತೆ ವಾಲ್ಮೀಕಿ ಸಮುದಾಯದ ನಾಯಕರು ಮೀಸಲಾತಿಯನ್ನು ಶೇಕಡಾ 7 ಕ್ಕೆ ಹೆಚ್ಚಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಒಕ್ಕಲಿಗ ಸಮುದಾಯ, ವಿಶ್ವಕರ್ಮ, ಬಂಜಾರ ಸಮುದಾಯ ಸೇರಿದಂತೆ ಹಲವು ಸಮುದಾಯಗಳು ತಮಗೂ ಮೀಸಲಾತಿ ನೀಡಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿವೆ.

ಸಿಎಂ ಯಡಿಯೂರಪ್ಪ ಹೇಳಿವುದೇನು:

ಮೀಸಲಾತಿಗಾಗಿ ಸತತ ಹೋರಾಟಗಳ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಎಲ್ಲಾ ಸಮುದಾಯಗಳನ್ನು ಸಮಾಧಾನಪಡಿಸುವಂತೆ ಹೇಳಿಕೆ ನೀಡುತ್ತಿದ್ದಾರೆ. ಯಡಿಯೂರಪ್ಪ ಅವರು ಸಂಪುಟದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳುತ್ತಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ಮಂತ್ರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.