ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ.
ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ ಪುಡಿ ತಯಾರಿಸಲು ನಿರ್ಧರಿಸಲಾಗಿದ್ದು, ಈ ರೀತಿ ತಯಾರಾದ ಪುಡಿಯನ್ನು ಮಕ್ಕಳಿಗೆ ಕೊಡಲಾಗುತ್ತದೆ.
ಇನ್ನು, ಕರೋನ ಹಿನ್ನಲೆ ಶಾಲೆಗಳು ಬಂದ್ ಆಗಿರುವುದರಿಂದ ಮಕ್ಕಳಿಗೆ ಬಿಸಿಯೂಟದ ಬದಲು ಆಹಾರ ಧಾನ್ಯವನ್ನು ವಿತರಿಸುತ್ತಿದ್ದು, ಅದರ ಜೊತೆಯೇ ಜೂನ್ ಮತ್ತು ಜುಲೈ ತಿಂಗಳಿಗೆ ಹಾಲಿನ ಪುಡಿ ವಿತರಿಸಲು ಸರ್ಕಾರ ತೀರ್ಮಾನಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.