ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ರಾಜಕೀಯ; ಸಮುದಾಯವನ್ನು ಒಡೆಯುವುದೇ ಅವರ ಉದ್ದೇಶ; ಸಿದ್ದರಾಮಯ್ಯ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ, ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸಮುದಾಯವನ್ನು ಒಡೆಯುವುದೇ ಅವರ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ…

siddaramaiah vijayaprabha

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ, ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸಮುದಾಯವನ್ನು ಒಡೆಯುವುದೇ ಅವರ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಸಿದ್ಧರಾಮಯ್ಯ ಅವರು ಟ್ವೀಟ್ ಮಾಡಿದ್ದು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ಆದೇಶ ನೀಡಿದ್ದು, ಈಗಲೂ ಅದರ ಅಧ್ಯಯನ ನಡೆಯುತ್ತಿದೆ. ಅದರ ವರದಿ ಬಂಡ ಮೇಲೆ ಒತ್ತಡ ಹೇರಬೇಕು. ಈಗಲೇ ಸಮಾವೇಶ, ರ್ಯಾಲಿಗಳು ನಡೆಸುವುದು ಅನಗತ್ಯ ಎನ್ನುವುದು ನನ್ನ ಅನಿಸಿಕೆ ಎಂದು ಹೇಳಿದ್ದಾರೆ.

ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಸಮುದಾಯವನ್ನು ಒಡೆಯುವುದೇ ಅವರ ಉದ್ದೇಶ. ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ ವಿರುದ್ಧವಲ್ಲವೇ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

Vijayaprabha Mobile App free

ಶೋಷಿತ ಸಮುದಾಯಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಏನೆಲ್ಲಾ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಗೊತ್ತು. ಇದರ ಬಗ್ಗೆ ಸರ್ಟಿಫಿಕೇಟ್ ಕೊಡೋಕೆ ಈಶ್ವರಪ್ಪ ಯಾರು? ಅವರು ಕೊಡೋ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಮೊದಲು ಅವರ ಸರ್ಕಾರ ಏನು ಮಾಡಿದೆ ಎಂಬುದನ್ನು ಹೇಳಬೇಕು ಎಂದು ಈಶ್ವರಪ್ಪ ಅವರಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.